AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್ ​​​! ಪರೀಕ್ಷೆ ಪ್ರಕ್ರಿಯೆ ಹೇಗೆ ? ಇಲ್ಲಿದೆ ಮಾಹಿತಿ

Board Exam For 9th and 11th Standard Students: ಸಾಕಷ್ಟು ವಿರೋಧಗಳ ಮಧ್ಯೆಯೇ ಪ್ರಸಕ್ತ 2023-24 ನೇ ಸಾಲಿನಲ್ಲಿಯೇ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್ ​​​! ಪರೀಕ್ಷೆ ಪ್ರಕ್ರಿಯೆ ಹೇಗೆ ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Sep 23, 2023 | 10:41 AM

ಬೆಂಗಳೂರು ಸೆ.23: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ತುಂಬಾ ಬದಲಾವಣೆಗಳು ಆಗುತ್ತಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (Department of School Education and Literacy) 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​​ ಪರೀಕ್ಷೆ (Board Exam) ನಡೆಸಲು ನಿರ್ಧರಿಸಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ ಒಂಬತ್ತನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತದೆ. ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಪರೀಕ್ಷಾ ಮಂಡಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

ಸಾಕಷ್ಟು ವಿರೋಧಗಳ ಮಧ್ಯೆಯೇ ಪ್ರಸಕ್ತ 2023-24 ನೇ ಸಾಲಿನಲ್ಲಿಯೇ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆಯನ್ನು ಇಲಾಖೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲಾ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಕಳೆದ ವರ್ಷವಷ್ಟೇ 5 ಮತ್ತು 8 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿತ್ತು.

ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ

ಪ್ರಥಮ ಪಿಯು ಪರೀಕ್ಷೆ ಹೇಗಿರುತ್ತೆ

  1. ದ್ವಿತೀಯ ಪಿಯುಸಿಯಲ್ಲಿ ಪರೀಕ್ಷಾ ಮೌಲ್ಯ ಮಾಪನ ಬೇರೆ ಕಡೆ ನಡೆಯುತ್ತೆ, ಆದರೆ ಪ್ರಥಮ ಪಿಯು ಪರೀಕ್ಷೆ ಮೌಲ್ಯಮಾಪನ ಆಯಾ ಕಾಲೇಜುಗಳಲ್ಲಿ ನಡೆಯುತ್ತೆ.
  2. ದ್ವೀತಿಯ ಪಿಯು ಪರೀಕ್ಷೆಯಲ್ಲಿ ಇರುವ ಹಾಗೇ ಮೇಲ್ವಿಚಾರಕರು ಪ್ರಥಮ ಪಿಯುಸಿಯಲ್ಲೂ ಇರುತ್ತಾರೆ.
  3. ದ್ವೀತಿಯ ಪಿಯು ಪರೀಕ್ಷೆ ಹಾಗೆಯೇ ಇಲ್ಲಿಯೂ ಪರೀಕ್ಷಾ ಪ್ರಕ್ರಿಯೆ ನಡೆಯುತ್ತೆ.
  4. ಪ್ರಶ್ನೆ ಪತ್ರಿಕೆಯನ್ನು ಇಲ್ಲಿಯೂ ಕೂಡ ಪಿಯು ಬೋರ್ಡ್​​ದಿಂದಲೇ ಕಳುಹಿಸಲಾಗುತ್ತದೆ.
  5. ಮೊದಲು ವಾರ್ಷಿಕವಾಗಿ ಒಂದು ಪರೀಕ್ಷೆ ನಡೆಸಲಾಗುತ್ತದೆ.
  6. ಅನುತ್ತೀರ್ಣ ಆದರೆ ಮತ್ತೊಂದು ಪೂರಕ ಪರೀಕ್ಷೆ ನಡೆಸಲಾಗುತ್ತದೆ.
  7. ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದ ಮೇಲೆ  ಮುಂದೇನು ಎಂಬುವುದರ ಬಗ್ಗೆ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಳಿ ಉತ್ತರ ಇಲ್ಲ.
  8. ಪರೀಕ್ಷೆಯ ಪ್ರಕ್ರಿಯೆ ದ್ವೀತಿಯ ಪಿಯು ಹಾಗೇ ಇರುತ್ತೆ, ಆದರೆ ಮೌಲ್ಯಮಾಪನ ಕಾಲೇಜು ಹಂತದಲ್ಲಿ ಮಾಡಲಾಗುತ್ತೆ.

9ನೇ ತರಗತಿ ಸಂಕಲನತ್ಮಕ ಮೌಲ್ಯಾ ಮಾಪನ ಪ್ರಶ್ನೆ

  1. ಇದು ಮೊದಲಿನ ಹಾಗೆ 5 ಮತ್ತು 8 ನೇ ತರಗತಿ ಪರೀಕ್ಷೆ ನಡೆದ ತರಹ ನಡೆಯುತ್ತೆ
  2. ಇಲ್ಲಿ ಪರೀಕ್ಷೆಯನ್ನು ಜಿಲ್ಲಾ ಹಂತದಲ್ಲೇ ಮಾಡಲಾಗುತ್ತೆ.
  3. ಆಯಾ ಶಾಲೆಯ ಶಿಕ್ಷಕರೇ ಪರೀಕ್ಷೆ ನಡೆಸುತ್ತಾರೆ, ಮೌಲ್ಯಮಾಪನ ಮಾಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Sat, 23 September 23

‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ