AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಸಿಯಲ್ ಅಟೆಂಡೆನ್ಸ್..!

Facial Attendance For Students: ಈ ವರ್ಷ SSLC ಪಿಯುಸಿಗೆ ಮೂರು ಪರೀಕ್ಷೆ ಹೆಂಗೂ ಪಾಸ್ ಆಗಬಹುದು.. ಒಂದು ಪರೀಕ್ಷಯಲ್ಲಿ ಫೇಲ್ ಆದ್ರೂ ಪಾಸ್ ಆಗಲು ಎರಡು ಪರೀಕ್ಷೆ ಇದ್ದೆ ಇದೆ ಎಂದು ಶಾಲೆಯಿಂದ ಹೊರಗುಳಿದು ಕ್ಲಾಸ್​ಗೆ ಚೆಕ್ಕರ್ ಹಾಕುವ SSLC ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಶಾಕ್ ಕೊಟ್ಟಿದೆ. ಇನ್ಮುಂದೆ ಶಾಲೆಗೆ ಹಾಜರಾಗದೆ ಇದ್ರೆ ಲಾಕ್ ಆಗೋದು ಪಕ್ಕ ಯಾಕೆ ಅಂತೀರಾ ಈ ಸ್ಟೋರಿ ನೋಡಿ.

ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಸಿಯಲ್ ಅಟೆಂಡೆನ್ಸ್..!
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on: Aug 21, 2024 | 9:51 PM

Share

ಬೆಂಗಳೂರು, (ಆಗಸ್ಟ್ 21): ಕೊವಿಡ್ ಸಯಮದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಯ ಮಾಡಿರಲಿಲ್ಲ. ಇದನ್ನೆ ಅಭ್ಯಾಸ ಮಾಡಿಕೊಂಡಿರುವ ಸಾಕಷ್ಟು ವಿದ್ಯಾರ್ಥಿಗಳು ಕ್ಲಾಸ್ ಗೆ ಹಾಜರಾಗುತ್ತಿಲ್ಲ. ಜೊತೆಗೆ ಈ ವರ್ಷ ಹೇಗೋ ಮೂರು ಮೂರು ಅವಕಾಶ ಎಕ್ಸಾಂ ಬರೆಯಲು ಅವಕಾಶ ಇದೇ ಎಂದು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಚೆಕ್ಕರ್ ಹಾಕುತ್ತಿದ್ದಾರೆ. ಇದೀಗ ಕ್ಲಾಸ್​ ಬಂಕ್​ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಸಿಯಲ್ ಅಟೆಂಡೆನ್ಸ್ ಜಾರಿಗೆ ತರಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.

ಹೌದು.. ಪೋಷಕರೇ ಕೊಂಚ ಇತ್ತ ಗಮನ ಕೊಡಿ. ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಫೇಸಿಯಲ್ ಅಟೆಂಡೆನ್ಸ್ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗೆ ಮಕ್ಕಳನ್ನ ಕಳುಹಿಸದೆ ಚಕ್ಕರ್ ಹಾಕಿಸೋ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಶಾಕ್ ಕೊಟ್ಟಿದೆ. ಈಗಾಗಲೇ ಸಾಪ್ಟವೇರ್ ಕಂಪನಿಗಳ ಜೊತೆ ಮಾತುಕಥೆಯಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಈ ಫೇಸಿಯಲ್ ಸ್ಕ್ರೀನಿಂಗ್ ಅಳವಡಿಸಲು ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಕರ್ನಾಟಕ ಶಿಕ್ಷಣದಲ್ಲಿ ಆಂಧ್ರ ಮಾಡೆಲ್: SSLC, PUC ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್

ಶಿಕ್ಷಣ ಇಲಾಖೆಯ ಉದ್ದೇಶವೇನು?

ಮೊಬೈಲ್ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳ ಫೇಸಿಯಲ್ ಹಾಜರಾತಿ ದಾಖಲಾತಿಗೆ ಇಲಾಖೆ ಮುಂದಾಗಿದೆ. ಇದರಿಂದ ಮಕ್ಕಳ ಶಾಲಾ ಹಾಜರಾತಿ ನೇರವಾಗಿ ಇಲಾಖೆಯ ಸ್ಟ್ಯಾಟ್ಸ್ ಗೆ ದಾಖಲಾಗುತ್ತದೆ. ಈ ಮೂಲಕ ಪ್ರತಿದಿನದ ವಿದ್ಯಾರ್ಥಿಗಳ ದಾಖಲಾತಿ ಹಾಗೂ ಎಷ್ಟು ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಎಷ್ಟು ಗೈರು ಹಾಜರಾತಿ ಎಂಬ ಕಂಪ್ಲೀಟ್ ಮಾಹಿತಿ ಇಲಾಖೆಗೆ ತಿಳಿಯಲಿದೆ. ಈ ಮೂಲಕ ಶಾಲೆಗೆ ಚಕ್ಕರ್ ಹಾಕುವ ಮಕ್ಕಳು ಹಾಗೂ ವಿದ್ಯಾರ್ಥಿಗಳನ್ನು ಶಾಲೆ ಬಿಡಿಸುವ ಪೋಷಕರ ಮೇಲೆ ಕ್ರಮಕ್ಕೆ ಇಲಾಖೆ ಚಿಂತನೆ ನಡೆಸಿದೆ. ಕಡ್ಡಾಯ ಹಾಜರಾತಿ ಕಡಿಮೆ ಇರುವ ಮಗುವಿಗೆ ಪರೀಕ್ಷೆಗೆ ಹಾಜರಾತಿ ವಿನಾಯತಿ ಕಡಿತದ ಬಗ್ಗೆಯೂ ಚಿತಂನೆ ಮಾಡಿದೆ.

ಒಟ್ಟಿನಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಹಾಗೂ ಶಾಲೆಯಿಂದ ಹೊರಗಡೆ ಉಳಿಯುವ ಮಕ್ಕಳ ಸಂಖ್ಯೆ ಕಡಿಮೆ ಮಾಡಲು ಜೊತೆಗೆ ಹಾಜರಾತಿ ಹೆಚ್ಚಿಸಲು ಶಾಲಾ ಶಿಕ್ಷಣ ಇಲಾಖೆ ಈ ಪ್ಲ್ಯಾನ್ ಮಾಡಿದೆ. ಹೀಗಾಗಿ ಫೇಸಿಯಲ್ ಅಟೆಂಡೆನ್ಸ್ ಪರಿಚಯಿಸಲು ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ಜಾರಿಗೆ ಆಗುತ್ತೆ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Vinay Kashappanavar
Vinay Kashappanavar
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!