AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಶಾಲೆಗಳು ಆರಂಭವಾಗುತ್ತಿದ್ದಂತೆಯೇ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದೆ.

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 1:01 PM

Share

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ(Egg), ಬಾಳೆ ಹಣ್ಣು(banana) ವಿತರಿಸಲು ಕರ್ನಾಟಕ ಸರ್ಕಾರ ಆದೇಶಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ(Students) ಮೊಟ್ಟೆ ವಿತರಣೆ ಮಾಡುವಂತೆ ಇಂದು(ಜೂನ್ 21) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಭ ಕಲ್ಯಾಣ್ ನಿರ್ದೇಶಕರು ಪಿ. ಎಂ. ಪೋಷಣ್, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ (ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದೇಕೆ? ತಜ್ಞರು ಕೊಟ್ಟ ಕಾರಣವೇನು? ಇಲ್ಲಿದೆ ವಿವರ

ಮಧ್ಯಾಹ್ನದ ಬಿಸಿಯೂಟದ ಜೊತೆಗೆ 1ರಿಂದ 8ನೇ ತರಗತಿ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಪೂರಕ ಪೌಷ್ಠಿಕ ಆಹಾರವಾಗಿ ಬೇಯಿಸಿದ ಮೊಟ್ಟೆ(ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ಒಬ್ಬ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ದಿನಾಂಕ 20-8-2-23ರಿಂದ ಪ್ರಾರಂಭಿಸಿ 15-723 ರವರೆಗೆ ಸರ್ಕಾರದ ಮುಂದಿನ ಆದೇಶ ಬರುವವರೆಗೂ ವಿತರಿಸುವಂತೆ ಈ ಮೂಲಕ ತಿಳಿಸಲಾಗಿದೆ.  ಈ ಸಂಬಂಧ ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟೆ/ಬಾಳೆ ಹಣ್ಣು/ಶೇಂಗಾ ಚಿಕ್ಕಿಯ ಘಟಕ ವೆಚ್ಚ 8ರೂ.ರಂತೆ ನಿಗದಿಪಡಿಸಿರುತ್ತದೆ. ಇದರಂತೆ ಭರಿಸಲು ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ರಾಯಚೂರು, ವಿಜಯನಗರ, ಬಳ್ಳಾರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 2023-24ನೇ ಸಾಲಿನ ಪಿಎಬಿ ಅನುಮೋದನೆ ಮತ್ತು ಅನುದಾನ ಹಂಚಿಕೆಯಂತೆ ಕೇಂದ್ರ ಮತ್ತು ರಾಜ್ಯದ ಪಾಲಿನ ಪ್ಲೆಕ್ಸಿ ಅನುದಾನದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ.

ಇನ್ನು ಉಳಿದಂತೆ 23 ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಫಲಾನುಭವಿ ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಿಂದಿನ ಸಾಲಿನ ಮಾರ್ಗಸೂಚಿಯಂತೆ ಎಸ್​ಡಿಎಂಸಿ ನೇತೃತ್ವದಲ್ಲಿ ಅಗತ್ಯ ಕ್ರಮಕೈಗೊಂಡು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುವಂತೆ ತಿಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:55 pm, Wed, 21 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ