ಏ. 20, 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆ ದಿನಾಂಕ ಬದಲು: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

CET Exam Date: ಇದೇ ಏಪ್ರಿಲ್ 20 ಮತ್ತು 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯ ದಿನಾಂಕ ಬದಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ ಹೊಸ ದಿನಾಂಕವನ್ನು ಪ್ರಕಟಿಸಿದೆ.

ಏ. 20, 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆ ದಿನಾಂಕ ಬದಲು: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ
Follow us
| Updated By: Digi Tech Desk

Updated on:Feb 14, 2024 | 3:01 PM

ಬೆಂಗಳೂರು, (ಜನವರಿ 09): 2024ನೇ ಸಾಲಿನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಇದೇ ಏಪ್ರಿಲ್ 20 ಮತ್ತು 21ರಂದು ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕವನ್ನು ಬದಲಾವಣೆ ಮಾಡಿದ್ದು, ಏಪ್ರೀಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ವಿವಿಧ ವೃತ್ತಿ ಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ದಿನಾಂಕವನ್ನು ನಾಲ್ಕು ತಿಂಗಳು ಮೊದಲೇ ಪ್ರಕಟಿಸಿತ್ತು. ಎಂಜಿನಿಯರಿಂಗ್‌, ಕೃಷಿ, ಪಶು ಸಂಗೋಪನೆ, ನರ್ಸಿಂಗ್‌, ಫಾರ್ಮಸಿ, ಆಯುಷ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ 2024ರ ಪ್ರವೇಶ ಪರೀಕ್ಷೆಗಳನ್ನು ಏಪ್ರಿಲ್‌ 20 ಮತ್ತು 21ರಂದು ನಿಗದಿ ಮಾಡಲಾಗಿತ್ತು. ಆದ್ರೆ, ಏಪ್ರಿಲ್ 21ರಂದು ಎನ್ ಡಿ ಎ ಪರೀಕ್ಷೆ ನಡೆಯಲಿದೆ. ಹೀಗಾಗಿ ಕೆಇಎ, ಸಿಇಟಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಜನವರಿ 10ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಸಲ್ಲಿಕೆ ಮಾಡಬೇಕು.

Published On - 8:19 pm, Tue, 9 January 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ