AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮತ್ತೆ ಜಾರಿ ಮಾಡುವುದಾಗಿ ಹೇಳಿ ಸೈಲೆಂಟ್ ಆದ ಸರ್ಕಾರ: ಕಾರಣವೇನು?

ರಾಜ್ಯದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್​​ ಮತ್ತೆ ಪ್ರಾರಂಭಿಸಲು ಸರ್ಕಾರ ಮುಂದಾಗಿತ್ತು. 2026-27ರಿಂದ ಆರಂಭಿಸಲು ಪ್ಲ್ಯಾನ್​ ಕೂಡ ಮಾಡಲಾಗಿತ್ತು, ಆದರೆ ಶೈಕ್ಷಣಿಕ ವರ್ಷ ಶುರುವಾದರೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಕೂಡಲೇ ಚುನಾವಣೆ ನಡೆಸುವಂತೆ ವಿದ್ಯಾರ್ಥಿ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ.

ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮತ್ತೆ ಜಾರಿ ಮಾಡುವುದಾಗಿ ಹೇಳಿ ಸೈಲೆಂಟ್ ಆದ ಸರ್ಕಾರ: ಕಾರಣವೇನು?
ಪ್ರಾತಿನಿಧಿಕ ಚಿತ್ರ Image Credit source: Getty images
Vinay Kashappanavar
| Edited By: |

Updated on: Jul 13, 2026 | 6:53 PM

Share

ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ (College Elections) ಮತ್ತೆ ಶುರು ಮಾಡಲು ಸರ್ಕಾರ ಮುಂದಾಗಿದೆ. ಆ ಮೂಲಕ ಕಾಲೇಜು ಹಂತದಲ್ಲಿಯೇ ಸ್ಟೂಡೆಂಟ್ ಲೀಡರ್ ಹುಟ್ಟುಹಾಕುಲು ಸರ್ಕಾರ ಸಜ್ಜಾಗಿದೆ. ಈ ವರ್ಷದ ಆರಂಭದಿಂದಲೇ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿತ್ತು. ಇತ್ತ ವಿದ್ಯಾರ್ಥಿಗಳು ಕೂಡ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮರುಕಳಿಸಲಿದೆ ಅಂತ ರೆಡಿಯಾಗಿದ್ದರು. ಆದರೆ ಯಾಕೋ ಸರ್ಕಾರ ಈ ಬಗ್ಗೆ ಸೈಲೆಂಟ್ ಆಗಿದೆ.

ಶೈಕ್ಷಣಿಕ ವರ್ಷ ಶುರುವಾಗಿದ್ದರೂ ಉನ್ನತ ಶಿಕ್ಷಣ ಸಚಿವರೂ ಇಲ್ಲ, ಚುನಾವಣೆಯೂ ಇಲ್ಲ

ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಸಂಬಂಧ ಈಗಾಗಲೇ ಸರ್ಕಾರ ಸಮಿತಿ ರಚನೆ ಮಾಡಿ ವರದಿ ಪಡೆದಿದೆ. ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ, ಬೇಡ್ವಾ ಎಂಬುವುದರ ಕುರಿತು ಶಿಕ್ಷಣ ತಜ್ಞರು, ಸಾರ್ವಜನಿಕರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಅದರಂತೆ 2026-27ನೇ ಸಾಲಿನಿಂದ ಕಾಲೇಜುಗಳಲ್ಲಿ ಚುನಾವಣೆ ಶುರು ಮಾಡಲು ಮುಂದಾಗಿತ್ತು. ಆದರೆ ಶೈಕ್ಷಣಿಕ ವರ್ಷ ಶುರುವಾಗಿದ್ದರೂ ಉನ್ನತ ಶಿಕ್ಷಣ ಸಚಿವರೂ ಇಲ್ಲ, ಕಾಲೇಜು ಚುನಾವಣೆಯೂ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ವಿದ್ಯಾರ್ಥಿ ವಲಯದಿಂದ ಸರ್ಕಾರಕ್ಕೆ ಚುನಾವಣೆ ನಡೆಸುವಂತೆ ತೀವ್ರ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪಬ್ಲಿಕ್ ಮಾದರಿಯ ಮೌಲ್ಯಮಾಪನ ಪರೀಕ್ಷೆ ಜಾರಿಗೆ ಮುಂದಾದ ಶಿಕ್ಷಣ ಇಲಾಖೆ

ಸಿಎಂ ಡಿಕೆ ಶಿವಕುಮಾರ್ ಕನಸಿನ ಮಹತ್ವದ ಯೋಜನೆ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್. ಆದರೆ ರಾಜ್ಯದಲ್ಲಿ ಈಗ ಕಾಲೇಜುಗಳ ಆರಂಭವಾದರೂ ಎಲೆಕ್ಷನ್ ಮಾತ್ರ ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ್ದಂತಾಗಿದೆ. ರಾಜ್ಯದಲ್ಲಿ ಕಾಲೇಜುಗಳು ವಿವಿಗಳು ಆರಂಭವಾದರೂ ಯಾವುದೇ ಯೂನಿಯನ್ ಎಲೆಕ್ಷನ್ ಇಲ್ಲದೆ ಯೋಜನೆ ಹಳ್ಳ ಹಿಡಿಯುವ ಲಕ್ಷಣಗಳು ಕಾಣಿಸುತ್ತಿವೆ. ಈಗ ಉನ್ನತ್ತ ಶಿಕ್ಷಣ ಸಚಿವರಿಲ್ಲದೆ ಮಂತ್ರಿಮಂಡಲ ವಿಸ್ತರಣೆಯಾಗದೆ. ಕಾಲೇಜುಗಳಲ್ಲಿ ಎಲೆಕ್ಷನ್ ಮಾಡೆಲ್​​ ಮತ್ತೆ ಹಳ್ಳ ಹಿಡಿದಿದ್ದು, ವಿದ್ಯಾರ್ಥಿ ನಾಯಕರಿಂದ ಎಲೆಕ್ಷನ್​ಗೆ ಬೇಡಿಕೆ ಕೇಳಿಬರುತ್ತಿದೆ. ಹೀಗಾಗಿ ಸರ್ಕಾರ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಒತ್ತಾಯಿಸಲಾಗಿದೆ.

ವಿದ್ಯಾರ್ಥಿಗಳು ಹೇಳುವುದೇನು?

ಕಾಲೇಜ್ ಎಲೆಕ್ಷನ್​ಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಭವಿಷ್ಯದ ವ್ಯಕ್ತಿತ್ವ, ಕಾಲೇಜುಗಳಲ್ಲಿನ ಸಮಸ್ಯೆಗಳನ್ನ ಪ್ರಶ್ನಿಸಲು ಅನಕೂಲವಾಗುತ್ತೆ, ಹೀಗಾಗಿ ಚುನಾವಣೆ ಬೇಕು ಎಂದು ಪದವಿ ವಿದ್ಯಾರ್ಥಿ ನಿತೀನ್ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಚಡ್ಡಿ’ ಮುಜುಗರ! 7ನೇ ತರಗತಿ ಬಾಲಕರಿಗೂ ಹಾಫ್ ಪ್ಯಾಂಟ್ ಬಟ್ಟೆ ವಿತರಣೆ, ಪೋಷಕರಿಗೆ ಇಕ್ಕಟ್ಟು

ಒಟ್ಟಿನಲ್ಲಿ ದಶಕಗಳ ಬಳಿಕ ಬ್ಯಾನ್ ಆಗಿದ್ದ ಎಲೆಕ್ಷನ್ ಈಗ ಮತ್ತೆ ಕಾಲೇಜು ಹಾಗೂ ವಿವಿಗಳಲ್ಲಿ ಬೇಕು ಅಂತ ಸರ್ಕಾರಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ಒತ್ತಾಯ ಶುರುವಾಗಿದ್ದು, ಈ ಬಗ್ಗೆ ಸರ್ಕಾರ ಯಾವ ನಿರ್ಧಾರಕ್ಕೆ ಬರುತ್ತೆ ಅಂತ ಕಾದು ನೋಡಬೇಕಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ