AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ

ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳಿ(Hostel Students)  ಉತ್ತಮ ಗುಣಮಟ್ಟದ ಆಹಾರ ನೀಡಲು ಸರ್ಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿದೆ.

ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ
ಕೋಟ ಶ್ರೀನಿವಾಸ್​ ಪೂಜಾರಿ
TV9 Web
| Edited By: |

Updated on: Dec 16, 2022 | 6:22 PM

Share

ಬೆಂಗಳೂರು: ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ(Midday Meal Scheme) ಮಕ್ಕಳಿಗೆ ‘ವಿಶೇಷ ಭೋಜನಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೀಗ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ(Hostel Students)  ಉತ್ತಮ ಗುಣಮಟ್ಟದ ಆಹಾರ ನೀಡಲು ಸರ್ಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿದೆ.

ಇದನ್ನೂ ಓದಿ: ಹಬ್ಬ-ಹರಿದಿನ, ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು1600 ರೂ. ರಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ. ಎಸ್.ಸಿ/ಎಸ್.ಟಿ ನಿರುದ್ಯೋಗಿಗಳಿಗೆ ಇ-ಕಾಮರ್ಸ್ ಅಡಿ ಆಹಾರ ಮತ್ತು ಇತರೆ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸಲು ವಾಹನ ಸೌಲಭ್ಯ ಒದಗಿಸಲಾಗಿದ್ದು, ವಿದ್ಯುತ್/ಇತರೆ ದ್ವಿಚಕ್ರ ವಾಹನಗಳಿಗೆ ಗರಿಷ್ಟ 50,000 ರೂ. ಸಹಾಯಧನ ಮತ್ತು 20,000 ರೂ. ಸಾಲ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ರಂತೆ, ಒಟ್ಟು ಗುರಿ 22400 ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. 300 ಎಸ್.ಸಿ/ಎಸ್.ಟಿ ಮಹಿಳೆಯರಿಗೆ ಪ್ರತಿಷ್ಠಿತ ಐ.ಐ.ಎಂ. ಬೆಂಗಳೂರಿನಲ್ಲಿ ಉದ್ಯಮಶೀಲತಾ ತರಬೇತಿ ನೀಡಲಾಗಿದೆ. ಪ್ರಸ್ತುತ 3 ಬ್ಯಾಚ್‌ಗಳ ತರಬೇತಿಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

2022-23ನೇ ಸಾಲನಿಂದ ಪ.ಜಾತಿ/ಪ.ಪಂಗಡದ ಬಿ.ಪಿ.ಎಲ್ ಕುಟುಂಬಗಳಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಕರ್ನಾಟಕದಲ್ಲಿ ಭೇಟಿ ನೀಡಿರುವ 10 ಪ್ರಮುಖ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿಯ 70 ಹಾಗೂ ಪರಿಶಿಷ್ಟ ಪಂಗಡದ 23 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಅತೀ ಸೂಕ್ಷ್ಮ ಸಮುದಾಯದ ಜನರ ಅಭಿವೃದ್ಧಿಗಾಗಿ ರೂ.50 ಕೋಟಿ ಅನುದಾನ ನೀಡಲಾಗಿದೆ ಎಂದರು.

ಮೆಟ್ರಿಕ್ ಪೂರ್ವ (9 ಮತ್ತು 10 ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗೆ 523.00 ಕೋಟಿ ರೂ. ನಿಗದಿ ಮಾಡಲಾಗಿದ್ದು, ಇದುವರೆಗೆ ರೂ.322.00 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿದ್ಯಾರ್ಥಿನಿಲಯ/ವಸತಿಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ 545.00 ಕೋಟಿ ರೂ. ನಿಗದಿಪಡಿಸಿದ್ದು, ಇದುವರೆಗೆ ರೂ.305.00 ಕೋಟಿಗಳನ್ನು ವೆಚ್ಚ ಮಾಡಲಾಗಿದೆ ಎಂದು ಲೆಕ್ಕ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ 92 ವಿದ್ಯಾರ್ಥಿಗಳಿಗೆ ಹಿಮಾಚಲ ಪ್ರದೇಶದಲ್ಲಿ Basic Mountaineering Course ಮತ್ತು Orientation Course ತರಬೇತಿ ನೀಡಲಾಗುತ್ತಿದೆ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು