5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ

5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ.

5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ
ಪ್ರಾತಿನಿಧಿಕ ಚಿತ್ರ
Image Credit source: news18.com

Updated on: Mar 10, 2023 | 6:04 PM

ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ (Board exams) ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ವಿವರವಾದ ಆದೇಶ ಕೈ ಸೇರಿದ ಮೇಲೆ ಮಾಹಿತಿ ನೀಡುತ್ತೇವೆ. ಆದರೆ ವಿವರವಾದ ಆದೇಶ ಬಂದ ಮೇಲೆ ಯಾವ ಕ್ರಮ ತಗೆದುಕೊಳ್ಳಬೇಕು ಅಂತಾ ಚರ್ಚೆ ಮಾಡಿ ತಿಳಿಸುವುದಾಗಿ ಮಾಹಿತಿ ನೀಡಿದರು.

ಇದನ್ನೂ ಓದಿ: Success Sutra: ಪರೀಕ್ಷಾ ಸಮಯದಲ್ಲಿ ಮಕ್ಕಳ ಜ್ಞಾನವೃದ್ಧಿಗಾಗಿ ವಾಸ್ತು ಟಿಪ್ಸ್​​ ಫಾಲೋ ಮಾಡಿ

ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್​​ ಎಸ್​. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಇಂದು (ಮಾ. 10) ತೀರ್ಪು ನೀಡಿದೆ.

ವಾರ್ಷಿಕ ಪರೀಕ್ಷೆಗೆ ಈ ಹಿಂದೆ ಕೂಡ ವಿರೋಧ  

ಇನ್ನು ಸಿಬಿಎಸ್​ಸಿ ಕೇಂದ್ರದ ಪಠ್ಯಕ್ರಮದ ಶಾಲೆಗಳಲ್ಲಿಯೂ ಇಲ್ಲದ ವಾರ್ಷಿಕ ಪರೀಕ್ಷೆ ರಾಜ್ಯದಲ್ಲಿ ಜಾರಿಗೆ ಮುಂದಾಗಿರೋದಕ್ಕೆ ಈ ಹಿಂದೆ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಇಲಾಖೆಯು ವಾರ್ಷಿಕ ಪರೀಕ್ಷೆಗಳ ಹೆಸರಲ್ಲಿ ದುಡ್ಡು ಮಾಡುವ ಹುನ್ನಾರ ನಡೆಸುತ್ತಿದೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು. ಪರೀಕ್ಷೆಗಳ ಮೂಲಕ ಕೋಟ್ಯಾಂತರ ರೂಪಾಯಿ ಲೂಟಿಯ ಹಾದಿ ಅಂತಾ ಪೋಷಕರ ಸಂಘಟನೆಗಳಿಂದ ವಾರ್ಷಿಕ ಪರೀಕ್ಷೆಗೆ ವಿರೋಧಿಸಿದ್ದರು.

ಇದನ್ನೂ ಓದಿ: Karnataka PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ರಾಜ್ಯದಲ್ಲಿ ಮೊದಲ ದಿನವೇ ಎರಡು ಕಾಪಿ ಕೇಸ್!

ಬೋರ್ಡ್ ಪರೀಕ್ಷೆ ಮಾಡಿದ್ರೆ ಖಾಸಗಿ ಶಾಲೆಗಳು ಇದನ್ನೆ ಮುಂದಿಟ್ಟುಕೊಂಡು ಪರೀಕ್ಷೆ ಹೆಸರಲ್ಲಿ ಫೀಸ್ ಸುಲಿಗೆ ಮಾಡುತ್ತಾರೆ. ಖಾಸಗಿ ಶಾಲೆಗಳ ಸೂಲಿಗೆಗೆ ಅನುಕೂಲ ಮಾಡಿಕೊಡುತ್ತವೇ ಈ ಪರೀಕ್ಷೆಗಳು. ಈ ಹಿಂದೆ ಸುರೇಶ್ ಕುಮಾರ್ ಸಚಿವರಿದ್ದಾಗ ಬೋರ್ಡ್ ಪರೀಕ್ಷೆಗೆ ಮುಂದಾಗಿದ್ದಾಗ ಶಿಕ್ಷಣ ತಜ್ಞರು ಹಾಗೂ ಪೋಷಕರಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ಕೇಳಿ ಬಂದಿತ್ತು. ವಿರೋಧದ ಬಳಿಕ ಬೋರ್ಡ್ ಪರೀಕ್ಷೆಯನ್ನ ಕೈಬಿಡಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Fri, 10 March 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us