AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಥಮಿಕ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶಾಲಾ ಮಕ್ಕಳಿಗೆ ಬ್ಯಾಗ್ ಭಾರ ವಿಚಾರವಾಗಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಪ್ರಾಥಮಿಕ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 3:21 PM

Share

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು (Schools) ಆರಂಭದ ಬೆನ್ನಲ್ಲೇ ಹೊಸ ಮತ್ತೆ ಶಾಲಾ ಮಕ್ಕಳಿಗೆ ಬ್ಯಾಗ್ ಭಾರ(heavy school bags) ಮುನ್ನೆಲೆಗ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka high Court) ವಜಾಗೊಳಿಸಿದೆ. ವಕೀಲ ರಮೇಶ್ ನಾಯಕ್ ಸಲ್ಲಿಸಿದ್ದ PIL ವಜಾಗೊಳಿಸಿ ಹೈಕೋರ್ಟ್ ಇಂದು (ಜೂನ್ 21) ಆದೇಶಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿರುವ ವಿಷಯವೇನೋ ಗಂಭೀರವಾಗಿದೆ. ಆದರೆ ಪೂರಕ ಅಂಶಗಳಿಲ್ಲದೇ ಅರೆಬೆಂದ ಅರ್ಜಿ ಸಲ್ಲಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವಂತೆ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ ಹೇಳಿದೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಶಾಲಾ ಬ್ಯಾಗ್ (School Bag) ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಈ ಹಿಂದಿನ ಅಂದರೆ ಬಿಜೆಪಿ ಸರ್ಕಾರ ಇದ್ದಾಗ ಶಿಕ್ಷಣ ಇಲಾಖೆ ಮುಂದಾಗಿತ್ತು. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಹೇಳಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:18 pm, Wed, 21 June 23

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು