
ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (ಎಸ್.ಸಿ.) ಮತ್ತು ಇತರ ಕೆಳ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತದೆ. ಈ ಇಲಾಖೆಯ ಮುಖ್ಯ ಉದ್ದೇಶ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸಹಾಯ, ಶೈಕ್ಷಣಿಕ ಪ್ರೋತ್ಸಾಹ, ಮತ್ತು ವಸತಿ ಸೌಲಭ್ಯಗಳನ್ನು ಒದಗಿಸುವುದು. ಇದೀಗ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಸೈನಿಕ್ ಶಾಲಾ ಪ್ರವೇಶ ಪರೀಕ್ಷಾ ನೋಂದಣಿ ಶೀಘ್ರದಲ್ಲೇ ಮುಕ್ತಾಯ; ಕೂಡಲೇ ಅರ್ಜಿ ಸಲ್ಲಿಸಿ
ಸಾಮಾನ್ಯವಾಗಿ ಈ ಯೋಜನೆಗಳು ಮತ್ತು ಸೌಲಭ್ಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಮೀಸಲಾಗಿವೆ. ನಿರ್ದಿಷ್ಟ ಯೋಜನೆಯನ್ನು ಅವಲಂಬಿಸಿ ಅರ್ಹತಾ ಮಾನದಂಡಗಳು ಬದಲಾಗಬಹುದು. ಹೆಚ್ಚಿನ ಮಾಹಿತಿಗಾಗಿ, ನೀವು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಕರ್ನಾಟಕದ ಜಿಲ್ಲೆಗಳ ವೆಬ್ಸೈಟ್ಗಳಲ್ಲೂ ಜಿಲ್ಲಾ ಮಟ್ಟದ ಇಲಾಖೆಯ ಮಾಹಿತಿ ಲಭ್ಯವಿದೆ.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ