AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಾದರೆ ಶಾಲೆ ಮುಂದುವರೆಸುತ್ತೀರಾ? ಈ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ ಇಲ್ಲಿದೆ

Karnataka School Reopen: ತಜ್ಞರ ಪ್ರಕಾರ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹೀಗಾಗಿ ಮಕ್ಕಳಿಗೆ ಸೋಂಕು ತಗುಲುವುದು ತುಂಬಾ ಕಡಿಮೆ. ಸೋಂಕು ತಗುಲಿದರೂ ಪರಿಣಾಮ‌ ಕಡಿಮೆ ಆಗುತ್ತೆಂದು ವರದಿಗಳು ತಿಳಿಸಿವೆ ಎಂದು ಹೇಳಿದರು.

ಕೊರೊನಾ ಹೆಚ್ಚಾದರೆ ಶಾಲೆ ಮುಂದುವರೆಸುತ್ತೀರಾ? ಈ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ ಇಲ್ಲಿದೆ
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Updated By: guruganesh bhat|

Updated on:Aug 24, 2021 | 4:21 PM

Share

ನೆಲಮಂಗಲ: ಕೊರೊನಾ ಹೆಚ್ಚಾದಾಗ ಶಾಲೆ ಮುಂದುವರೆಸುವ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾವು ಶಿಕ್ಷಣ, ಆರೋಗ್ಯ ಎರಡಕ್ಕೂ ಒತ್ತು ಕೊಡುತ್ತೇವೆ ಎಂದು ನೆಲಮಂಗಲದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಮಾತನಾಡಿದ ಅವರು, ಶಾಲೆಯಿಂದ ಹೊರಬಂದ ಬಳಿಕ ಕೊವಿಡ್ ತಡೆ ನಿಯಮ ಪಾಲನೆ ಆಗುವುದಿಲ್ಲ. ಬಸ್‌ಗಳಲ್ಲಿ, ಹೊರಗೆ ಕೊವಿಡ್ ನಿಯಮ ಪಾಲನೆ ಆಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಜ್ಞರ ಪ್ರಕಾರ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹೀಗಾಗಿ ಮಕ್ಕಳಿಗೆ ಸೋಂಕು ತಗುಲುವುದು ತುಂಬಾ ಕಡಿಮೆ. ಸೋಂಕು ತಗುಲಿದರೂ ಪರಿಣಾಮ‌ ಕಡಿಮೆ ಆಗುತ್ತೆಂದು ವರದಿಗಳು ತಿಳಿಸಿವೆ ಎಂದು ಹೇಳಿದರು.

ಒಂದು ಕಡೆ ನೈಟ್ ಕರ್ಫ್ಯೂ ಮತ್ತೊಂದು ಕಡೆ ಶಾಲೆ ಆರಂಭದ ಕುರಿತೂ ಮಾತನಾಡಿದ ಅವರು, ನೈಟ್ ಕರ್ಫ್ಯೂ‌ಗೂ ಶಾಲೆ ಆರಂಭಕ್ಕೂ ಯಾವುದೇ ಸಂಬಂಧ ಇಲ್ಲ. ಎಲ್ಲಾ ಕಡೆ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಶಾಲೆ ಆರಂಭಿಸಿ ಎಂದು ಹೇಳಿದ್ದೇವೆ ಎಂದು ಖಚಿತಪಡಿಸಿದರು.

ಈವರ್ಷ ಎಸ್ಎಸ್ಎಲ್‌ಸಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪಿಯುಸಿಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಇಲ್ಲ. ಪಿಯುಸಿಗೆ ದಾಖಲಾಗುವುದಕ್ಕೆ ಎಲ್ಲ ವ್ಯವಸ್ಥೆ ಮಾಡುತ್ತೇವೆ. 12 ಲಕ್ಷ ವಿದ್ಯಾರ್ಥಿಗಳು ಪಿಯುಸಿಗೆ ದಾಖಲಾಗಬಹುದಾಗಿದೆ. SSLCಯಲ್ಲಿ ಈ ಬಾರಿ 8.75 ಲಕ್ಷ ವಿದ್ಯಾರ್ಥಿಗಳು ಪಾಸ್ ಆಗಿರುವ ಕಾರಣ ಪಿಯುಸಿ ದಾಖಲಾತಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

ನಗದು ರಹಿತ ಟಿಕೆಟ್, ಎಲೆಕ್ಟ್ರಾನಿಕ್ ಬಸ್ ಸೌಲಭ್ಯ, ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲೇ ಬಸ್ ಪಾಸ್ ವಿತರಣೆಗೆ ಕ್ರಮ: ಸಾರಿಗೆ ಸಚಿವ ಶ್ರೀರಾಮುಲು

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

(Karnataka School Reopen Education Minister BC Nagesh answers about covid 19 cases surge)

Published On - 4:15 pm, Tue, 24 August 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?