AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಮಕ್ಕಳ ಶಿಕ್ಷಕರ ಸಂಬಂಧ ಮತ್ತೆ ಶುರುವಾಗಿದೆ. ವಿದ್ಯಾರ್ಥಿಗಳು ಶಾಲೆ ಆರಂಭದ ಬಗ್ಗೆ ಸಂತೋಷವಾಗಿದ್ದಾರೆ. ಆನ್ಲೈನ್ ಕ್ಲಾಸ್ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಶಾಲೆ ಆರಂಭಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ. ಕೊವಿಡ್ ಮಾರ್ಗಸೂಚಿ ಕಠಿಣವಾಗಿ ಅನುಸರಿಸಲು ಹೇಳಲಾಗಿದೆ. ಶಾಲೆ ಆರಂಭ ನನಗೆ ತುಂಬಾ ಸಂತೋಷವಾಗಿದೆ: ಬೊಮ್ಮಾಯಿ

ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 23, 2021 | 12:39 PM

Share

ಬೆಂಗಳೂರು: ಕರ್ನಾಟದಲ್ಲಿ ಇಂದಿನಿಂದ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಸ್ಥೈರ್ಯ ನೀಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದ್ದು, ಮಾತನಾಡುವ ವೇಳೆ ಆನ್​​ಲೈನ್ ಕ್ಲಾಸ್ ಬೇಕಾ, ಆಫ್​​ಲೈನ್ ಕ್ಲಾಸ್​ ಬೇಕಾ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳ ಈ ಪ್ರಶ್ನೆಗೆ ಅತ್ಯುತ್ಸಾಹದಿಂದ ಉತ್ತರಿಸಿದ ಮಕ್ಕಳು ಆಫ್​​ಲೈನ್ ಕ್ಲಾಸ್​ ಬೇಕು ಎಂದು ಹೇಳಿದ್ದಾರೆ. ಅಂತೆಯೇ ಸಿಎಂ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಖುಷಿಯಿಂದ ಉತ್ತರಿಸಿದ್ದಾರೆ.

ಸುಮಾರು ಒಂದೂವರೆ ವರ್ಷ ಕೊವಿಡ್ ಕಾರಣಕ್ಕೆ ಶಾಲೆ ಬಂದ್ ಆಗಿದ್ದವು ಆ ಸಂದರ್ಭದಲ್ಲಿ ಪರ್ಯಾಯ ಕ್ರಮದ ಮೂಲಕ ಶಿಕ್ಷಣ ಕೊಡಲಾಗಿದೆ. ವಿದ್ಯಾರ್ಥಿಗಳ ಜತೆ ಶಿಕ್ಷಣ ಇಲಾಖೆ ನಿರಂತರ ಸಂಪರ್ಕದಲ್ಲಿತ್ತು. ಶಿಕ್ಷಣ ಇಲಾಖೆ ಉತ್ತಮವಾದ ಕೆಲಸ ಮಾಡಿದೆ. ಇದೀಗ ಅಧ್ಯಯನ ಮಾಡಿ ತಜ್ಞರ ವರದಿ ಪಡೆದು ಶಾಲೆ ಆರಂಭ ಮಾಡಲಾಗಿದೆ. ಮಲ್ಲೇಶ್ವರಂ ಕಾಲೇಜಿನ ಮಕ್ಕಳು ಹಾಗೂ ಶಿಕ್ಷಕರ ಜತೆ ಚರ್ಚೆ ಮಾಡಿದ್ದೇನೆ. ಇಲ್ಲಿ ಕಳೆದ ಒಂದು ವಾರದಿಂದ ತಯಾರಿ ಮಾಡಲಾಗಿದೆ. ಶಿಕ್ಷಕರು ಹಾಗೂ ಮುಖ್ಯೋಪಾದ್ಯಯರಿಗೆ ಶಾಲೆ ಆರಂಭ ಖುಷಿಯಾಗಿದೆ. ರಾಜ್ಯಾದ್ಯಂತ ಇದೇ ವಾತಾವರಣ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಮಕ್ಕಳ ಶಿಕ್ಷಕರ ಸಂಬಂಧ ಮತ್ತೆ ಶುರುವಾಗಿದೆ. ವಿದ್ಯಾರ್ಥಿಗಳು ಶಾಲೆ ಆರಂಭದ ಬಗ್ಗೆ ಸಂತೋಷವಾಗಿದ್ದಾರೆ. ಆನ್ಲೈನ್ ಕ್ಲಾಸ್ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಶಾಲೆ ಆರಂಭಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ. ಕೊವಿಡ್ ಮಾರ್ಗಸೂಚಿ ಕಠಿಣವಾಗಿ ಅನುಸರಿಸಲು ಹೇಳಲಾಗಿದೆ. ಶಾಲೆ ಆರಂಭ ನನಗೆ ತುಂಬಾ ಸಂತೋಷವಾಗಿದೆ. ಇಂದು ಮಕ್ಕಳಿಗೆ ಕೊವಿಡ್​ನಿಂದ ಸ್ವತಂತ್ರ ಸಿಕ್ಕಿದೆ ಎಂದು ಸಂತಸಪಟ್ಟಿದ್ದಾರೆ.

ಗಡಿ ಜಿಲ್ಲೆ ಹಾಗೂ ಕೊವಿಡ್ ಪಾಸಿಟಿವಿಟಿ ರೇಟ್ ಹೆಚ್ಚಿರುವ ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಎಲ್ಲ ಕಡೆ ಶಾಲೆ ಆರಂಭವಾದಂತೆ ಆಗಲಿದೆ. 1 ರಿಂದ 8ನೇ ತರಗತಿಗೆ ಶಾಲೆ ಆರಂಭದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ತಜ್ಞರಿಗೆ ಶಾಲೆಗಳ ಆರಂಭಕ್ಕೆ ವರದಿ ನೀಡುವಂತೆ ಕೇಳಿದ್ದೇವೆ. ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲಿಯೇ ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನು ಸ್ವಾಗತಿಸಲು ಸಜ್ಜಾದ ಶಾಲೆಗಳು; ಕೊರೊನಾ ಭೀತಿಯ ನಡುವೆಯೂ ಕಲಿಕೆಯ ಸಂಭ್ರಮ ಶುರು 

School Reopening: ನಿಮ್ಮ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಿ; ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಶುಭ ಸುದ್ದಿ

Published On - 11:06 am, Mon, 23 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!