1 ರಿಂದ 8ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಕುರಿತು ಮಹತ್ವದ ಸಭೆ: ಚರ್ಚೆಯಾಗಲಿರುವ ಪ್ರಮುಖ ಸಂಗತಿಗಳೇನು?

Karnataka School Reopening: ಕೇರಳ ಹಾಗೂ ಮಹರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆ ಕಾಣುತ್ತಿರುವ ಹಿನ್ನೆಲೆ 1 ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆಗೆ ಬರಲು ಅನುಮತಿ ನಿರಾಕರಿಸುವ ಸಾಧ್ಯತೆಯೂ ಇದ್ದು, 6, 7, 8 ನೇ ತರಗತಿ ಆರಂಭಕ್ಕೆ ಮಾತ್ರ ಅವಕಾಶ ನೀಡಬಹುದು ಎಂಬ ಅಭಿಪ್ರಾಯವೂ ಬಲವಾಗಿ ಕೇಳಿಬಂದಿದೆ.

1 ರಿಂದ 8ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಕುರಿತು ಮಹತ್ವದ ಸಭೆ: ಚರ್ಚೆಯಾಗಲಿರುವ ಪ್ರಮುಖ ಸಂಗತಿಗಳೇನು?
ಸಾಂದರ್ಭಿಕ ಚಿತ್ರ
Follow us
| Updated By: Skanda

Updated on: Aug 30, 2021 | 7:18 AM

ಬೆಂಗಳೂರು: ಕೊರೊನಾ ದೆಸೆಯಿಂದಾಗಿ ಶಿಸ್ತುಬದ್ಧ ಶಿಕ್ಷಣ ಪದ್ಧತಿಗೆ (Education System) ದೊಡ್ಡ ಹೊಡೆತ ಬಿದ್ದಿದೆ. ಮೊದಲನೇ ಅಲೆ, ಎರಡನೇ ಅಲೆ ಆತಂಕದಲ್ಲಿ ಮಕ್ಕಳನ್ನು ಮನೆಯಿಂದ ಆಚೆ ಕಳುಹಿಸುವುದೇ ಅಪಾಯ ಎಂಬ ಪರಿಸ್ಥಿತಿಯಿದ್ದ ಕಾರಣ ಆನ್​ಲೈನ್​ ಶಿಕ್ಷಣ (Online Classes) ಅನಿವಾರ್ಯ ಆಗಿತ್ತು. ಆದರೆ, ಕಳೆದ ವಾರದಿಂದ ಕರ್ನಾಟಕದಲ್ಲಿ 9 ರಿಂದ 12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಬಹುತೇಕ ಭಾಗಗಳಲ್ಲಿ ಉತ್ತಮ ಸ್ಪಂದನೆಯೂ ದೊರೆತಿದೆ. ಈಗ ಅದರ ಬೆನ್ನಲ್ಲೇ 1ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸುವ (School Reopening) ಕುರಿತು ಚಿಂತನೆ ನಡೆಸಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಭೆ ನಡೆಸಲಿದ್ದಾರೆ.

ಕೊರೊನಾ ಆತಂಕದ ನಡುವೆಯೂ 1 ರಿಂದ 8ನೇ ತರಗತಿ ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳಬೇಕೋ? ಬೇಡವೋ? ಎಂಬ ಪ್ರಶ್ನೆಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಸೂಕ್ತ ಸಲಹೆ ನೀಡಲಿದ್ದು, ಅವರ ವರದಿಯ ಆಧಾರದ ಮೇಲೆ ಸರ್ಕಾರ, ಶಿಕ್ಷಣ ಇಲಾಖೆ ಮುಂದಿನ ಹೆಜ್ಜೆ ಇರಿಸಲಿದೆ. ಒಂದುವೇಳೆ ತಜ್ಞರು ಶಾಲೆಯಲ್ಲಿ ಭೌತಿಕ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ ತೋರಿಸಿದ್ದೇ ಆದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳು ಶುರುವಾಗಲಿವೆ.

ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಸೆಪ್ಟೆಂಬರ್​​ ಮೊದಲ ವಾರದಲ್ಲಿಯೇ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದ್ದು, ತಜ್ಞರು ಒಪ್ಪಿಗೆ ನೀಡಿದರೆ ನಿಗದಿತ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಲಿದೆ. ಆದರೆ, ಇದೇ ವೇಳೆಯಲ್ಲಿ ಕೇರಳ ಹಾಗೂ ಮಹರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆ ಕಾಣುತ್ತಿರುವ ಹಿನ್ನೆಲೆ 1 ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆಗೆ ಬರಲು ಅನುಮತಿ ನಿರಾಕರಿಸುವ ಸಾಧ್ಯತೆಯೂ ಇದ್ದು, 6, 7, 8 ನೇ ತರಗತಿ ಆರಂಭಕ್ಕೆ ಮಾತ್ರ ಅವಕಾಶ ನೀಡಬಹುದು ಎಂಬ ಅಭಿಪ್ರಾಯವೂ ಬಲವಾಗಿ ಕೇಳಿಬಂದಿದೆ.

ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಎಲ್ಲಾ ಜಿಲ್ಲೆಗಳ ನಿರ್ದೇಶಕರಿಂದ ವರದಿ ಪಡೆದಿರುವ ಶಿಕ್ಷಣ ಇಲಾಖೆ, ಈ ವರದಿ ಆಧಾರದ ಮೇಲೆ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಎಲ್ಲಾ ನಿರ್ದೇಶಕರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಮಗ್ರ ವರದಿ ಸಲ್ಲಿಕೆಯೂ ಆಗಿದ್ದು, ಅದನ್ನು ಇಂದಿನ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ತಜ್ಞರು, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಭಾಗವಹಿಸಲಿರುವ ಇಂದಿನ ಚರ್ಚೆಯಲ್ಲಿ ಈ ಕೆಳಕಂಡ ಅಂಶಗಳು ಪ್ರಮುಖವಾಗಿ ಚರ್ಚೆಗೆ ಒಳಗಾಗಲಿವೆ ಎಂದು ಹೇಳಲಾಗುತ್ತಿದೆ.

ಇಂದಿನ ಸಭೆಯಲ್ಲಿ ಚರ್ಚೆಯಾಗುವ ವಿಷಯಗಳು ಏನು? 1. ಶಾಲಾ ಆರಂದ ಕುರಿತಾಗಿ ಶಿಕ್ಷಣ ಆಯುಕ್ತರ ಕೈ ಸೇರಿರುವ ವರದಿಯಲ್ಲಿರುವ ಅಂಶಗಳು 2. ಶಾಲೆಗಳಲ್ಲಿ ಮೊದಲು ಯಾವ ತರಗತಿಯನ್ನು ಆರಂಭಿಸಬೇಕು 3. ಯಾವ ದಿನಾಂಕದಿಂದ ಶಾಲೆ ಆರಂಭಿಸಬೇಕು 4. ಯಾವ ರೀತಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು 5. ತರಗತಿಗಳನ್ನು ಎಷ್ಟು ಅವಧಿ ನಡೆಸಬೇಕು 6. ಯಾವ ಹಂತಗಳಲ್ಲಿ ಶಾಲೆಗಳ ಆರಂಭ ಮಾಡಬೇಕು 7. ಏನೆಲ್ಲಾ ಸೌಲಭ್ಯ ಶಾಲೆ ತೆರೆಯೊದಕ್ಕೆ ಮಾಡಿಕೊಳ್ಳಬೇಕು 8. ಶಾಲೆ ಆರಂಭ ಮಾಡಿದರೆ ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು 9. ಶಾಲೆ ಆರಂಭವಾಗದೇ ಇದ್ದಲ್ಲಿ ಆ ತರಗತಿಗಳಿಗೆ ಪೂರಕ ಶಿಕ್ಷಣ ಹೇಗೆ ನೀಡಬೇಕು 10. ಕೊವಿಡ್ ಮಾರ್ಗಸೂಚಿ ಪಾಲನೆ ಹೇಗೆ ‌ಮಾಡಬೇಕು

ಇದನ್ನೂ ಓದಿ: ನಾವು ನಮ್ಮ ಮಕ್ಕಳನ್ನು ಉಳಿಸಬೇಕು: ದೆಹಲಿಯಲ್ಲಿ ಶಾಲೆ ಪುನರಾರಂಭ ಬಗ್ಗೆ ಏಮ್ಸ್ ವೈದ್ಯರ ಸಲಹೆ

ಕೊರೊನಾದಿಂದ ಶಾಲೆಗಳಿಲ್ಲದೆ ಓದಲು..ಬರೆಯಲು ಮರೆತ ಮಕ್ಕಳು; ಇದು ಯಾವ ರಾಜ್ಯದಲ್ಲಿ ಗೊತ್ತಾ?

(Karnataka School Reopening major meeting with CM Basavaraj Bommai on starting Primary School Classes)

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​