AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಡ್ಡಿ ಇಲ್ಲ; ಆದರೆ ಶಾಲಾ ಕಾಲೇಜುಗಳು ಬಂದ್

ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸರ್ಕಾರದಿಂದ ಅನುಮತಿ ಇರಲಿದೆ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು‌ ಅನುದಾನ ರಹಿತ ಶಾಲೆಗಳು ಬಂದ್ ಆಗಿರಲಿವೆ ಎಂದು ತಿಳಿಸಲಾಗಿದೆ.

ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಡ್ಡಿ ಇಲ್ಲ; ಆದರೆ ಶಾಲಾ ಕಾಲೇಜುಗಳು ಬಂದ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 07, 2022 | 8:01 PM

Share

ಬೆಂಗಳೂರು: ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅಡ್ಡಿ ಇರುವುದಿಲ್ಲ. ಪರೀಕ್ಷಾರ್ಥಿಗಳು ಪ್ರವೇಶ ಪ್ರತಿ ತೋರಿಸಿ ಓಡಾಡಬಹುದು. ಪರೀಕ್ಷಾ ಕೊಠಡಿಗೆ ತೆರಳುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸರ್ಕಾರದಿಂದ ಅನುಮತಿ ಇರಲಿದೆ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು‌ ಅನುದಾನ ರಹಿತ ಶಾಲೆಗಳು ಬಂದ್ ಆಗಿರಲಿವೆ ಎಂದು ತಿಳಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಾರದ 5 ದಿನ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರಲಿದೆ. ವಸತಿ ಹಾಗೂ ತುಲಾಭಾರ ಉತ್ಸವಾದಿ ಸೇವೆಗಳು ರದ್ದು ಆಗಲಿದೆ. ಮುಂದಿನ‌ ಆದೇಶದವರೆಗೂ ಸೇವೆ ರದ್ದುಪಡಿಸಿ ಶ್ರೀಕ್ಷೇತ್ರದಿಂದ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಕ್ಷೇತ್ರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ.

ಕರ್ನಾಟಕ ಕೊರೊನಾ ಪ್ರಕರಣಗಳ ವಿವರ ಕರ್ನಾಟಕದಲ್ಲಿ ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 4.15 ಇದ್ದು, ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಈವರೆಗೆ 30,31,052 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 29,62,548 ಮಂದಿ ಚೇತರಿಸಿಕೊಂಡಿದ್ದಾರೆ. ಕೊರೊನಾದಿಂದ ಒಟ್ಟು 38,362 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 30,113 ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 6812, ದಕ್ಷಿಣ ಕನ್ನಡ 211, ಮೈಸೂರು 219, ಮಂಡ್ಯ 129, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬಾಗಲಕೋಟೆ, ರಾಯಚೂರು 2, ಬಳ್ಳಾರಿ 62, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ, ವಿಜಯಪುರ 36, ಯಾದಗಿರಿ 1.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಇದನ್ನೂ ಓದಿ: ಇನ್ನೂ ಕೆಲ ಸಮಯ ಕೊರೊನಾ ಸೋಂಕಿನೊಂದಿಗೆ ಬದುಕುವುದು ಕಲಿಯಬೇಕಿದೆ: ದಕ್ಷಿಣ ಆಫ್ರಿಕಾದ ತಜ್ಞ ವೈದ್ಯೆ ಆಂಜೆಲಿಕ್ ಕೊಯೆಟ್ಜಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ