AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Schools Reopen in Karnataka: ಶಾಲೆಗಳು ಪುನರಾರಂಭ, ತರಗತಿಗಳು ಮೇ 31 ರಂದು ಪ್ರಾರಂಭವಾಗುತ್ತವೆ

2023-24ರ ಶೈಕ್ಷಣಿಕ ವರ್ಷಕ್ಕೆ ಸೋಮವಾರದಂದು (May 29) ರಾಜ್ಯದಾದ್ಯಂತ ವಿದ್ಯಾರ್ಥಿಗಳ ಮಧ್ಯಮ ಸಂಖ್ಯೆಯೊಂದಿಗೆ ಶಾಲೆಗಳು ಪುನರಾರಂಭಗೊಂಡಿದ್ದು, ತರಗತಿಗಳು ಅಧಿಕೃತವಾಗಿ ಮೇ 31 ರಂದು ಪ್ರಾರಂಭಗೊಳ್ಳಲಿವೆ.

Schools Reopen in Karnataka: ಶಾಲೆಗಳು ಪುನರಾರಂಭ, ತರಗತಿಗಳು ಮೇ 31 ರಂದು ಪ್ರಾರಂಭವಾಗುತ್ತವೆ
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on: May 30, 2023 | 3:43 PM

Share

49 ದಿನಗಳ ಬೇಸಿಗೆ ರಜೆಯ (Summer Holidays) ನಂತರ, 2023-24ರ ಶೈಕ್ಷಣಿಕ ವರ್ಷಕ್ಕೆ (Academic Year) ಸೋಮವಾರದಂದು (May 29) ರಾಜ್ಯದಾದ್ಯಂತ ವಿದ್ಯಾರ್ಥಿಗಳ ಮಧ್ಯಮ ಸಂಖ್ಯೆಯೊಂದಿಗೆ ಶಾಲೆಗಳು ಪುನರಾರಂಭಗೊಂಡಿದ್ದು, ತರಗತಿಗಳು ಅಧಿಕೃತವಾಗಿ ಮೇ 31 ರಂದು ಪ್ರಾರಂಭಗೊಳ್ಳಲಿವೆ (Schools Reopen). ಜೊತೆಗೆ ಇಂಡಕ್ಷನ್ ಕಾರ್ಯಕ್ರಮ ಮತ್ತು ಮಧ್ಯಾಹ್ನದ ಊಟವು ಇರಲಿದೆ. ಶಾಲೆಯ ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಶಾಲೆ ಆವರಣವನ್ನು ಸ್ವಚ್ಛಗೊಳಿಸಲು ಮತ್ತು ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

ಹೆಚ್ಚಿನ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ, ವಿದ್ಯಾರ್ಥಿಗಳ ಸಂಖ್ಯೆ ಮಧ್ಯಮವಾಗಿತ್ತು. ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.ಅಗರ ಸರಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಚಿಕ್ಕದೇವೇಗೌಡ ದಿ ಹಿಂದೂ ಪತ್ರಿಕೆ ಜೊತೆ ಮಾತನಾಡಿ, “ಹದಿನೈದು ದಿನಗಳಿಂದ ಪೋಷಕರಿಗೆ ಕರೆ ಮಾಡಿ ಸೋಮವಾರ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ತಿಳಿಸಿದ್ದೇವೆ. ಹಾಗಾಗಿ ಶೈಕ್ಷಣಿಕ ವರ್ಷದ ಮೊದಲ ದಿನ ಶೇ.90ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ನಾವು ವಿದ್ಯಾರ್ಥಿಗಳಿಗೆ ಹಾಡುಗಾರಿಕೆ, ನೃತ್ಯ ಮತ್ತು ಇತರ ಪಠ್ಯೇತರ ಚಟುವಟಿಕೆಗಳೊಂದಿಗೆ ಅರ್ಧ ದಿನದ ತರಗತಿಗಳನ್ನು ನಡೆಸಿದ್ದೇವೆ. ವಿದ್ಯಾರ್ಥಿಗಳನ್ನು ಪರಸ್ಪರ ಪರಿಚಯಿಸಲಾಯಿತು.” ಎಂದು ತಿಳಿಸಿದರು.

ಇದನ್ನೂ ಓದಿ: ಮಧ್ಯಾಹ್ನದ ಊಟದ ಜೊತೆಗೆ ಮಕ್ಕಳಿಗೆ ಸಿಹಿ ಹಂಚಿ; ಶಾಲೆಗಳ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

ಹೆಚ್ಚಿನ ಖಾಸಗಿ ಶಾಲೆಗಳು ಒಂದು ವಾರದ ಹಿಂದೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಪ್ರಾರಂಭಿಸಿದವು ಮತ್ತು ಇತರ ತರಗತಿಗಳು ಸೋಮವಾರದಿಂದ ಪ್ರಾರಂಭವಾದವು. ಕನಕಪುರ ರಸ್ತೆಯ ಸಾಧನಾ ಪಬ್ಲಿಕ್ ಶಾಲೆಯ ಅಧ್ಯಕ್ಷ ಹರ್ಷಕುಮಾರ್ ಎನ್. ದಿ ಹಿಂದೂ ಜೊತೆ ಮಾತನಾಡುತ್ತಾ, “ನಾವು 10 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿದ್ದೇವೆ. ಉಳಿದ ತರಗತಿಗಳು ಸೋಮವಾರದಿಂದ ಆರಂಭಗೊಂಡಿವೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು, ಎರಡ್ಮೂರು ದಿನಗಳಲ್ಲಿ ಸುಧಾರಿಸಲಿದೆ” ಎಂದು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!