AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Schools Reopening: ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ

ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Schools Reopening: ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 14, 2021 | 10:25 PM

Share

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ 2ಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ಮತ್ತೆ ತೆರೆಯಲು ಕ್ರಮ ವಹಿಸಲಾಗುವುದು. ಶಾಲೆಗಳ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೊವಿಡ್ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡರು. ಮಕ್ಕಳ ಚಿಕಿತ್ಸೆಗಾಗಿ ಐಸಿಯು ಬೆಡ್​ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ ಪಾಸಿಟಿವಿಟಿ ದರ 0.75. ನಗರದಲ್ಲಿ ಶೇ 2ರಷ್ಟು ಪಾಸಿಟಿವಿಟಿ ದರ ಹಾಗೂ ಶೇ 40ರಷ್ಟು ಆಕ್ಸಿಜನೇಟೆಡ್ ಬೆಡ್​ಗೆ ಸೋಂಕಿತರಾದರು ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಯಿತು.

ಜಿಲ್ಲಾವಾರು ಪಾಸಿಟಿವಿಟಿ ಪ್ರಮಾಣ ಕಳೆದ 7 ದಿನಗಳ ಸರಾಸರಿಯಲ್ಲಿ (ಆಗಸ್ಟ್​ 7ರಿಂದ 13) ರಾಜ್ಯದ 4 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2ಕ್ಕಿಂತ ಹೆಚ್ಚಿರುವುದು ದಾಖಲಾಗಿದೆ. ಸರ್ಕಾರದ ಸೂಚನೆಯಂತೆ ಈ ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ. ವಿವಿಧ ಜಿಲ್ಲೆಗಳ ಶೇಕಡಾವಾರು ಪಾಸಿಟಿವಿಟಿ ಮಾಹಿತಿ ಇಂತಿದೆ…

ದಕ್ಷಿಣ ಕನ್ನಡ 3.98, ಚಿಕ್ಕಮಗಳೂರು 3.24, ಕೊಡಗು 2.71, ಉಡುಪಿ 2.42, ಹಾಸನ 2.23, ಚಾಮರಾಜನಗರ 1.29, ಶಿವಮೊಗ್ಗ 1.26, ಮೈಸೂರು 1.20, ಉತ್ತರ ಕನ್ನಡ 1.16, ಬೆಂಗಳೂರು ಗ್ರಾಮಾಂತರ 1.13, ಕೋಲಾರ 0.86, ಚಿತ್ರದುರ್ಗ 0.85, ತುಮಕೂರು 0.77, ಬೆಳಗಾವಿ 0.76, ಬೆಂಗಳೂರು ನಗರ 0.66, ಮಂಡ್ಯ 0.64, ದಾವಣಗೆರೆ 0.63, ಕಲಬುರ್ಗಿ 0.33, ರಾಮನಗರ 0.32, ಧಾರವಾಡ 0.29, ಕೊಪ್ಪಳ 0.24, ರಾಯಚೂರು 0.24, ಬಾಗಲಕೋಟೆ 0.22, ಚಿಕ್ಕಬಳ್ಳಾಪುರ 0.17, ಬೀದರ್ 0.16, ಗದಗ 0.14, ಹಾವೇರಿ 0.13, ಯಾದಗಿರಿ 0.09, ವಿಜಯಪುರ 0.08.

(Karnataka Schools Reopening High School and PUC Colleges to Open in District with Less Positivity Rate)

ಇದನ್ನೂ ಓದಿ: ದೀರ್ಘಾವಧಿಯಲ್ಲಿ ಆನ್‌ಲೈನ್ ತರಗತಿಗಳು ಸುಗಮವಾಗಲ್ಲ : ಶಾಲೆ ಮತ್ತೆ ತೆರೆಯಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋದ ವಿದ್ಯಾರ್ಥಿ

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ