AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Second PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ಸಿದ್ಧತೆ ಬಗ್ಗೆ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು.

Second PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ಸಿದ್ಧತೆ ಬಗ್ಗೆ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು
ಬಿಸಿ ನಾಗೇಶ್ (ಸಂಗ್ರಹ ಚಿತ್ರ)
Ganapathi Sharma
| Edited By: |

Updated on:Mar 10, 2023 | 1:10 PM

Share

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ (Second PUC Exam) ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು (MCQ) ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ 200 ಮೀಟರ್​​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೊಜನೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಎಲ್ಲ ಪರೀಕ್ಷಾ ಕೊಠಡಿಗಳಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಪರೀಕ್ಷಾ ಕೊಠಡಿ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಆರಂಭದ ಸಮಯಕ್ಕೆ 15 ನಿಮಿಷಗಳ ಮೊದಲು ಕೊಠಡಿಯೊಳಗೆ ತೆರಳಬಹುದು ಎಂದು ಸಚಿವರು ತಿಳಿಸಿದ್ದಾರೆ.

ಮೇ ಮೊದಲ ವಾರ ಫಲಿತಾಂಶ

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದೂ ಸಚಿವರು ತಿಳಿಸಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆಯಲು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಫಲಿತಾಂಶ ಘೋಷಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 2nd PUC Exam: ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ, ಪರೀಕ್ಷೆ ಸರಳೀಕರಣ

ಹಿಜಾಬ್​ಗಿಲ್ಲ ಅವಕಾಶ

ನಾವು ಯಾರದೇ ವಿನಂತಿಯ ಆಧಾರದ ಮೇಲೆ ಸರ್ಕಾರವನ್ನು ನಡೆಸುತ್ತಿಲ್ಲ. ಈ ನೆಲದ ಕಾನೂನಿನ ಆಧಾರದಲ್ಲಿ ಸರ್ಕಾರವನ್ನು ನಡೆಸುತ್ತಿದ್ದೇವೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ಅನುಮತಿಸಲಾಗುವುದಿಲ್ಲ ಎಂದು ನಾಗೇಶ್ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆಯು ಈ ಬಾರಿ ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲೂ 1 ಅಂಕದ 20 ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಿದೆ. ಈ ಹಿಂದೆ 5 ಅಥವಾ 6 ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಮೌಲ್ಯಮಾಪನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಗ್ರೇಸ್ ಮಾರ್ಕ್ಸ್​​ಗೆ ಸಂಬಂಧಿಸಿಯೂ ತಿದ್ದುಪಡಿ ಮಾಡಲಾಗಿದೆ.

ಪರೀಕ್ಷೆಗೆ ತೆರಳುವವರಿಗೆ ಕೆಎಸ್​ಆರ್​ಟಿಸಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್​​ಟಿಸಿ ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ಈಗಾಗಲೇ ತಿಳಿಸಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Wed, 8 March 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್