Sign In

By signing in or creating an account, you agree with Associated Broadcasting Company's Terms & Conditions and Privacy Policy.

Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ

Karnataka second puc exam 3 Result Declared: ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ ಪ್ರಕಟವಾಗಿದೆ. ಇಂದು (ಜುಲೈ 16) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಸಿದ್ದು, ಈ ಪರೀಕ್ಷೆಯಲ್ಲೂ ಸಹ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jul 16, 2024 | 3:38 PM

ಬೆಂಗಳೂರು, (ಜುಲೈ 16): ಇದೇ ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇಂದು(ಜುಲೈ 16) ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕದಾದ್ಯಂತ ಇದೇ ಜೂನ್ 25ರಿಂದ ಜುಲೈ5 ರವರೆಗೆ ದ್ವಿತೀಯ ಪಿಯುಸಿ-3 ಪರೀಕ್ಷೆ ನಡೆಸಲಾಗಿತ್ತು. 76,005 ವಿದ್ಯಾರ್ಥಿಗಳಿಂದ ಪರೀಕ್ಷೆ ನೋಂದಣಿ ಮಾಡಿಕೊಂಡಿದ್ದರು. ಆದ್ರೆ, 75466 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 17,911 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಇಂದು (ಜುಲೈ 16) ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ ಮೂಲಕ ಪ್ರಕಟಿಸಲಾಗಿದ್ದು, ನಾಳೆ(ಜುಲೈ 7) ಆಯಾ ಕಾಲೇಜುಗಳಲ್ಲೂ ಫಲಿತಾಂಶವನ್ನು ನೋಟಿಸ್ ಬೋರ್ಡ್​​ಗೆ ಹಾಕಲಾಗುತ್ತ. ಇನ್ನು ಇಂದೇ ಆನ್​ಲೈನ್​ನಲ್ಲಿ ಫಲಿತಾಂಶ ನೋಡಬೇಕು ಎಂದರೆ ಈ ಕೆಳಗೆ ನೀಡಿರುವ ಮಹಿತಿಯನ್ನು ಅನುಸರಿಸಿ.

ಫಲಿತಾಂಶ ನೋಡುವುದು ಹೇಗೆ?

  • kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • https://www.karresults.nic.in ಅನ್ನು ಕ್ಲಿಕ್‌ ಮಾಡಿ.
  • ಹೋಮ್‌ ಪೇಜ್‌ನಲ್ಲಿ ಪಿಯುಸಿ ಪೂರಕ ಫಲಿತಾಂಶದ ಲಿಂಕ್‌ ಕ್ಲಿಕ್‌ ಮಾಡಿ
  • ಸ್ಕ್ರೀನ್‌ನಲ್ಲಿ ಹೊಸ ಪುಟ ಕಾಣಿಸುತ್ತದೆ
  • ನಿಮ್ಮ ರೋಲ್‌ ನಂಬರ್‌, ಜನ್ಮ ದಿನಾಂಕ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿಯನ್ನು ನಮೂದಿಸಿ
  • ಸ್ಕ್ರೀನ್‌ ಮೇಲೆ ನಿಮ್ಮ ಫಲಿತಾಂಶ ಕಾಣುತ್ತದೆ
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಅಥವಾ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:39 pm, Tue, 16 July 24

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ