AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2021: ಲೋಡ್ ಆಗುತ್ತಿಲ್ಲ ವೆಬ್​ಸೈಟ್; ಸಂಜೆಯ ವೇಳೆಗೆ ವಿದ್ಯಾರ್ಥಿಗಳಿಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಕೈತಲುಪುವ ಸಾಧ್ಯತೆ

ವೆಬ್ಸೈಟ್ ಓಪನ್ ಆಗದೇ ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಸಾಹಸ ಪಡುತ್ತಿದ್ದಾರೆ.

SSLC Results 2021: ಲೋಡ್ ಆಗುತ್ತಿಲ್ಲ ವೆಬ್​ಸೈಟ್; ಸಂಜೆಯ ವೇಳೆಗೆ ವಿದ್ಯಾರ್ಥಿಗಳಿಗೆ  ಎಸ್​ಎಸ್​ಎಲ್​ಸಿ ಫಲಿತಾಂಶ ಕೈತಲುಪುವ ಸಾಧ್ಯತೆ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Aug 09, 2021 | 5:31 PM

Share

ಬೆಂಗಳೂರು: ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್​ಸಿ ಫಲಿತಾಂಶ ಘೋಷಿಸಿದರೂ ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳಿಗೆ ಸಂಜೆಯ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು. ಜತೆಗೆ ಮೆಸೇಜ್ ಮೂಲಕ ವಿದ್ಯಾರ್ಥಿಗಳು ತಮ್ಮ ತಮ್ಮ ಮೊಬೈಲ್​ಗಳಲ್ಲೇ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಸಹ ಅವರು ಸ್ಪಷ್ಟಪಡಿಸಿದರು. ಇತ್ತ ವಿದ್ಯಾರ್ಥಿಗಳು ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಮತ್ತು ಸೈಬರ್ ಸೆಂಟರ್​ಗಳ ಮೂಲಕ ಫಲಿತಾಂಶ ಪಡೆದುಕೊಳ್ಳಲು ಯತ್ನಿಸುತ್ತಿದ್ದರೂ ವೆಬ್​ಸೈಟ್ ಮೂಲಕ ಫಲಿತಾಂಶ ದೊರೆಯುತ್ತಿಲ್ಲ. ವೆಬ್​ಸೈಟ್ ಓಪನ್ ಆಗದೇ ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಸಾಹಸ ಪಡುತ್ತಿದ್ದಾರೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ, ಇದು ಸಂಜೆಯ ವೇಳೆಗೆ ಸುಲಭವಾಗಿ ದೊರೆಯಬಹುದು 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್ಸೈಟ್ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು (SSLC Result 2021) ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610. ಹಾಗೂ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Karnataka SSLC Result 2021 Live: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 99.9 ಶೇಕಡಾ ರಿಸಲ್ಟ್

Karnataka SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ

(Karnataka SSLC Class 10 Result 2021 Check KSEEB Board Class 10 Result online)

Published On - 5:15 pm, Mon, 9 August 21

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ