AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Exam Result-2: ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಎಸ್​​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಫಲಿತಾಂಶ ಇದೀಗ ಪ್ರಕಟವಾಗಿದೆ. ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ, ಆನ್​ಲೈನ್​​ನಲ್ಲಿ ಅಂಕಪಟ್ಟಿ ಡೌನ್​ಲೋಡ್​ ಹೇಗೆಂಬ ಮಾಹಿತಿ ಜತೆಗೆ, ರಿಸಲ್ಟ್​​ ಅಪ್​ಡೇಟ್​​ಗೆ ಮುಂದೆ ಓದಿ.

Karnataka SSLC Exam Result-2: ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
ಗಣಪತಿ ಶರ್ಮಾ
|

Updated on:Jul 10, 2024 | 12:30 PM

Share

ಬೆಂಗಳೂರು, ಜುಲೈ 10: ಕರ್ನಾಟಕ ಎಸ್​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DOB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಜೂನ್​ 14 ರಿಂದ 21ರವರಗೆ ಕರ್ನಾಟಕದ 724 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆಗಳು ನಡೆದಿದ್ದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಸುಮಾರು 13,085 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವುದಕ್ಕಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಆನ್​ಲೈನ್​ನಲ್ಲಿ ಫಲಿತಾಂಶ ನೋಡುವುದು ಹೇಗೆ?

  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ.
  • ವೆಬ್‌ಸೈಟ್‌ನ ಹೋಮ್​ ಪೇಜ್​ನಲ್ಲಿ Karnataka SSLC Supplementary Result 2024 ಲಿಂಕ್ ಕಾಣಿಸುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗ್ ಇನ್ ಆಗಲು ಕೇಳಲಾದ ವಿವರಗಳನ್ನು ನಮೂದಿಸಿ.
  • ವಿವರಗಳನ್ನು ಸಲ್ಲಿಸಲು ಎಂಟರ್ ಒತ್ತಿರಿ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.

ಇದನ್ನೂ ಓದಿ: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಶಾಕ್ ನೀಡಿದ ಜ್ಞಾನಭಾರತಿ, ಬೆಂಗಳೂರು ನಗರ ವಿವಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Wed, 10 July 24

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ