AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಶೇ. 62ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಇರುವುದಿಲ್ಲ ಎಂದು ಅದಾಗಲೇ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಸ್ವತಃ ಸಚಿವರೇ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ:  ಶೇ. 62 ಫಲಿತಾಂಶ
ಸಾಂದರ್ಭಿಕ ಚಿತ್ರImage Credit source: PTI
Vinay Kashappanavar
| Edited By: |

Updated on: May 30, 2026 | 5:55 PM

Share

ಬೆಂಗಳೂರು, ಮೇ 30: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು. ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ
  • ಮೇ 18ರಿಂದ 25ರ ವರೆಗೆ ನಡೆದಿದ್ದ ಪರೀಕ್ಷೆ
  • 49,351 ವಿದ್ಯಾರ್ಥಿಗಳ ಪೈಕಿ 31,080 ಮಂದಿ ಪಾಸ್​

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 23ರಂದು ಪ್ರಕಟವಾಗಿದ್ದು, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ಪಾಸ್​​ ಆಗಿದ್ದರು. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಉತ್ತೀರ್ಣರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿತ್ತು. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನ, ಉತ್ತರ ಕನ್ನಡ 3ನೇ ಸ್ಥಾನ (ಶೇ 98.09) ಮತ್ತು ಹಾಸನ 4ನೇ ಸ್ಥಾನ (ಶೇ 97.51) ಗಳಿಸಿದ್ದವು.

ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ; ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

ಈ ಬಾರಿ ಇಲ್ಲ ಮೂರನೇ ಪರೀಕ್ಷೆ

ಈ ಬಾರಿ ಎಸ್ಎಸ್​ಎಲ್​​ಸಿ ಮೂರನೇ ಪರೀಕ್ಷೆ ಇರುವುದಿಲ್ಲ. ಈ ಬಗ್ಗೆ ಏಪ್ರಿಲ್ 23ರಂದು ನಡೆದ ಸುದ್ದಿಗೋಷ್ಠಿಯಲ್ಲಿಯೇ ಅಂದಿನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದರು. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ತಿಳಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ