SSLC Result 2022 Topper: ಅಮಿತ್ ಮಾದರ್ ಸೇರಿ 145 ವಿದ್ಯಾರ್ಥಿಗಳು 2022ರ ಎಸ್​ಎಸ್​ಎಲ್​ಸಿ ಟಾಪರ್ಸ್

2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಅಮಿತ್ ಮಾದರ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

SSLC Result 2022 Topper: ಅಮಿತ್ ಮಾದರ್ ಸೇರಿ 145 ವಿದ್ಯಾರ್ಥಿಗಳು 2022ರ ಎಸ್​ಎಸ್​ಎಲ್​ಸಿ ಟಾಪರ್ಸ್
ಸಾಂದರ್ಭಿಕ ಚಿತ್ರImage Credit source: sentinelassam.com
Follow us
| Updated By: ಸುಷ್ಮಾ ಚಕ್ರೆ

Updated on:May 19, 2022 | 7:50 PM

2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶ(Result) ಪ್ರಕಟಗೊಂಡಿದ್ದು,ಅಮಿತ್ ಮಾದರ್(Amith Madar) ಅವರು ರಾಜ್ಯಕ್ಕೆ ಪ್ರಥಮ ಸ್ಥಾನ(1st Rank) ಪಡೆದಿದ್ದಾರೆ. ವಿಜಯಪುರ ಜಿಲ್ಲೆಯ ಜುಮನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಅಲ್ಲದೆ, ತಮಕೂರಿನ ಚಿಕ್ಕನಾಯಕನಹಳ್ಳಿಯ ಎಳನಾಡು ಪ್ರೌಢಶಾಲೆಯ ಬಿ.ಆರ್.ಭೂಮಿಕಾ(B.R.Bhumika) ಅವರು ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ.

ಈಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಅಮಿತ್ ಮಾದರ್ ಬಿ.ಆರ್.ಭೂಮಿಕಾ, ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಪ್ರವೀಣ್ ನೀರಲಗಿ, ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿನಿ ಸಹನಾ ರಾಯರ್ ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಐಶ್ವರ್ಯ ಕನಸೆ, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಎಸ್.ಎಸ್.ಆಕೃತಿ, ಹಾಸನ ಜಿಲ್ಲೆಯ ವಿದ್ಯಾರ್ಥಿ ಅರ್ಜುನ್ ನಾಯ್ಕ್, ಉತ್ತರ ಕನ್ನಡ ಜಿಲ್ಲೆಯ ಚಿರಾಗ್ ಮಹೇಶ್ ನಾಯ್ಕ್, ಉಡುಪಿ ಜಿಲ್ಲೆಯ ವಿದ್ಯಾರ್ಥಿನಿ ಗಾಯತ್ರಿ, ಬೆಂಗಳೂರಿನ ಸದಾಶಿವನಗರದ ಪೂರ್ಣಪ್ರಜ್ಞಾ ಶಾಲೆಯ ಅನಘಾ ಎಂ.ಮೂರ್ತಿ, ಬಳ್ಳಾರಿ ಜಿಲ್ಲೆ ಕೂಡ್ಲಿಗಿಯ ಸಿ.ಎಸ್.ಕವನಾ 625 ಕ್ಕೆ 625ಕ್ಕೆ ಅಂಕಗಳನ್ನು ಪಡೆದಿದ್ದಾರೆ.

ಹಾವೇರಿಯ ಹಳೇ ಮಣ್ಣಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಪ್ರವೀಣ್ ನೀರಲಗಿ​, ಬೆಳಗಾವಿಯ ಸಹನಾ ಮಹಾಂತೇಶ್ ರಾಯರ್, ಸತ್ತಿಗೇರಿಯ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ, ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕಮ್ಮರಡಿ ಸರ್ಕಾರಿ ಜೂನಿಯರ್ ಕಾಲೇಜಿನ S.S.ಆಕೃತಿ​, ಶಿರಸಿಯ ಸರ್ಕಾರಿ ಮಾರಿಕಾಂಬ ಪಿಯು ಕಾಲೇಜಿನ ಚಿರಾಗ್ ಮಹೇಶ್ ನಾಯ್ಕ್​, ಮೈಸೂರಿನ ಜಾಕಿ ಕ್ವಾರ್ಟರ್ಸ್​ನ ಆದರ್ಶ ವಿದ್ಯಾಲಯದ ಮೈಸೂರಿನ ಎಂ.ಜಿ.ಏಕತಾ, ಉಡುಪಿ ಜಿಲ್ಲೆ ಕುಂದಾಪುರದ ಕಲವರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ನಿಶಾ, ಹಾಸನದ ಚನ್ನರಾಯಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಹೆಚ್.ಎನ್.ಪ್ರಗತಿ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಮಂಡ್ಯದ ಮೊಗರಹಳ್ಳಿಯ ಶ್ರೀಮಹಾಲಕ್ಷ್ಮೀ ಹೈಸ್ಕೂಲ್​ನ ಹೆಚ್.ಎಸ್.ಅಪೂರ್ವ, ಶೀವಮೊಗ್ಗದ ಅಶೋಕನಗರದ ಅನನ್ಯಾ ಇಂಗ್ಲಿಷ್ ಹೈಸ್ಕೂಲ್​ನ ಹೆಚ್.ಎನ್.ಅನನ್ಯಾ, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಹನುಮಂತಪುರ ಗೇಟ್​ನ BGS​ ಪಬ್ಲಿಕ್ ಶಾಲೆಯ ಜಿ.ಹರ್ಷಿತಾ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಹೈಸ್ಕೂಲ್​ನ ಆತ್ಮೀಯ ಎಂ.ಕಶ್ಯಪ್, ಮೈಸೂರಿನ ನಂಜನಗೂಡಿನ ಕಾರ್ಮೆಲ್ ಹೈಸ್ಕೂಲ್​ನ ಜಿ.ದೇವಿಕಾ, ಮೈಸೂರಿನ ಟಿ.ನರಸೀಪುರದ ಬನ್ನೂರಿನ ಶ್ರೀಆದಿಚುಂಚನಗಿರಿ ಇಂಗ್ಲಿಷ್ ಹೈಸ್ಕೂಲ್​ನ ಬಿ.ಎಂ.ದಿಶಾ, ಬೆಂಗಳೂರಿನ ಕೊಟ್ಟಿಗೆಪಾಳ್ಯದ ಎಸ್.ವಿ.ಪಬ್ಲಿಕ್ ಶಾಲೆಯ ಗಾನಾ ಸಿ.ಶೇಖರ್ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಇತ್ತೀಚೆಗಷ್ಟೇ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8,20,900 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಅಲ್ಲದೆ, ಶೇಕಡಾ 85.63ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

Published On - 12:55 pm, Thu, 19 May 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ