AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Result 2022 Topper: ಅಮಿತ್ ಮಾದರ್ ಸೇರಿ 145 ವಿದ್ಯಾರ್ಥಿಗಳು 2022ರ ಎಸ್​ಎಸ್​ಎಲ್​ಸಿ ಟಾಪರ್ಸ್

2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಅಮಿತ್ ಮಾದರ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

SSLC Result 2022 Topper: ಅಮಿತ್ ಮಾದರ್ ಸೇರಿ 145 ವಿದ್ಯಾರ್ಥಿಗಳು 2022ರ ಎಸ್​ಎಸ್​ಎಲ್​ಸಿ ಟಾಪರ್ಸ್
ಸಾಂದರ್ಭಿಕ ಚಿತ್ರImage Credit source: sentinelassam.com
TV9 Web
| Updated By: ಸುಷ್ಮಾ ಚಕ್ರೆ|

Updated on:May 19, 2022 | 7:50 PM

Share

2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶ(Result) ಪ್ರಕಟಗೊಂಡಿದ್ದು,ಅಮಿತ್ ಮಾದರ್(Amith Madar) ಅವರು ರಾಜ್ಯಕ್ಕೆ ಪ್ರಥಮ ಸ್ಥಾನ(1st Rank) ಪಡೆದಿದ್ದಾರೆ. ವಿಜಯಪುರ ಜಿಲ್ಲೆಯ ಜುಮನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಅಲ್ಲದೆ, ತಮಕೂರಿನ ಚಿಕ್ಕನಾಯಕನಹಳ್ಳಿಯ ಎಳನಾಡು ಪ್ರೌಢಶಾಲೆಯ ಬಿ.ಆರ್.ಭೂಮಿಕಾ(B.R.Bhumika) ಅವರು ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ.

ಈಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಅಮಿತ್ ಮಾದರ್ ಬಿ.ಆರ್.ಭೂಮಿಕಾ, ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಪ್ರವೀಣ್ ನೀರಲಗಿ, ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿನಿ ಸಹನಾ ರಾಯರ್ ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಐಶ್ವರ್ಯ ಕನಸೆ, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಎಸ್.ಎಸ್.ಆಕೃತಿ, ಹಾಸನ ಜಿಲ್ಲೆಯ ವಿದ್ಯಾರ್ಥಿ ಅರ್ಜುನ್ ನಾಯ್ಕ್, ಉತ್ತರ ಕನ್ನಡ ಜಿಲ್ಲೆಯ ಚಿರಾಗ್ ಮಹೇಶ್ ನಾಯ್ಕ್, ಉಡುಪಿ ಜಿಲ್ಲೆಯ ವಿದ್ಯಾರ್ಥಿನಿ ಗಾಯತ್ರಿ, ಬೆಂಗಳೂರಿನ ಸದಾಶಿವನಗರದ ಪೂರ್ಣಪ್ರಜ್ಞಾ ಶಾಲೆಯ ಅನಘಾ ಎಂ.ಮೂರ್ತಿ, ಬಳ್ಳಾರಿ ಜಿಲ್ಲೆ ಕೂಡ್ಲಿಗಿಯ ಸಿ.ಎಸ್.ಕವನಾ 625 ಕ್ಕೆ 625ಕ್ಕೆ ಅಂಕಗಳನ್ನು ಪಡೆದಿದ್ದಾರೆ.

ಹಾವೇರಿಯ ಹಳೇ ಮಣ್ಣಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಪ್ರವೀಣ್ ನೀರಲಗಿ​, ಬೆಳಗಾವಿಯ ಸಹನಾ ಮಹಾಂತೇಶ್ ರಾಯರ್, ಸತ್ತಿಗೇರಿಯ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ, ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕಮ್ಮರಡಿ ಸರ್ಕಾರಿ ಜೂನಿಯರ್ ಕಾಲೇಜಿನ S.S.ಆಕೃತಿ​, ಶಿರಸಿಯ ಸರ್ಕಾರಿ ಮಾರಿಕಾಂಬ ಪಿಯು ಕಾಲೇಜಿನ ಚಿರಾಗ್ ಮಹೇಶ್ ನಾಯ್ಕ್​, ಮೈಸೂರಿನ ಜಾಕಿ ಕ್ವಾರ್ಟರ್ಸ್​ನ ಆದರ್ಶ ವಿದ್ಯಾಲಯದ ಮೈಸೂರಿನ ಎಂ.ಜಿ.ಏಕತಾ, ಉಡುಪಿ ಜಿಲ್ಲೆ ಕುಂದಾಪುರದ ಕಲವರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ನಿಶಾ, ಹಾಸನದ ಚನ್ನರಾಯಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಹೆಚ್.ಎನ್.ಪ್ರಗತಿ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಮಂಡ್ಯದ ಮೊಗರಹಳ್ಳಿಯ ಶ್ರೀಮಹಾಲಕ್ಷ್ಮೀ ಹೈಸ್ಕೂಲ್​ನ ಹೆಚ್.ಎಸ್.ಅಪೂರ್ವ, ಶೀವಮೊಗ್ಗದ ಅಶೋಕನಗರದ ಅನನ್ಯಾ ಇಂಗ್ಲಿಷ್ ಹೈಸ್ಕೂಲ್​ನ ಹೆಚ್.ಎನ್.ಅನನ್ಯಾ, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಹನುಮಂತಪುರ ಗೇಟ್​ನ BGS​ ಪಬ್ಲಿಕ್ ಶಾಲೆಯ ಜಿ.ಹರ್ಷಿತಾ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಹೈಸ್ಕೂಲ್​ನ ಆತ್ಮೀಯ ಎಂ.ಕಶ್ಯಪ್, ಮೈಸೂರಿನ ನಂಜನಗೂಡಿನ ಕಾರ್ಮೆಲ್ ಹೈಸ್ಕೂಲ್​ನ ಜಿ.ದೇವಿಕಾ, ಮೈಸೂರಿನ ಟಿ.ನರಸೀಪುರದ ಬನ್ನೂರಿನ ಶ್ರೀಆದಿಚುಂಚನಗಿರಿ ಇಂಗ್ಲಿಷ್ ಹೈಸ್ಕೂಲ್​ನ ಬಿ.ಎಂ.ದಿಶಾ, ಬೆಂಗಳೂರಿನ ಕೊಟ್ಟಿಗೆಪಾಳ್ಯದ ಎಸ್.ವಿ.ಪಬ್ಲಿಕ್ ಶಾಲೆಯ ಗಾನಾ ಸಿ.ಶೇಖರ್ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಇತ್ತೀಚೆಗಷ್ಟೇ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8,20,900 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಅಲ್ಲದೆ, ಶೇಕಡಾ 85.63ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

Published On - 12:55 pm, Thu, 19 May 22

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ