AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2022: ಎಸ್ಎಸ್​​ಎಲ್​ಸಿ ಫಲಿತಾಂಶ ಪ್ರಕಟ, 145 ಮಕ್ಕಳು ಔಟ್​ ಆಫ್ ಔಟ್

ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ 2022: ಫಲಿತಾಂಶದ ವಿವರವನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೀಡಿದರು.

Karnataka SSLC Result 2022: ಎಸ್ಎಸ್​​ಎಲ್​ಸಿ ಫಲಿತಾಂಶ ಪ್ರಕಟ, 145 ಮಕ್ಕಳು ಔಟ್​ ಆಫ್ ಔಟ್
ಸಾಂಧರ್ಬಿಕ ಚಿತ್ರ Image Credit source: Hindustan Times
TV9 Web
| Edited By: |

Updated on:May 19, 2022 | 1:24 PM

Share

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಫಲಿತಾಂಶದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ನೀಡಿದರು. ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶದ ವಿವರ ನೀಡಿದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊರೊನಾ ಪಿಡುಗು ವ್ಯಾಪಿಸಿದ್ದ ಕಾರಣದಿಂದಾಗಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆದಿರಲಿಲ್ಲ. ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳ ಪೈಕಿ ಶೇ 85.63ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ. ಕಳೆದ ಹತ್ತುವರ್ಷಗಳ ಅಂಕಿಅಂಶಗಳನ್ನು ಪರಿಶೀಲಿಸಿದರೆ ಇದು ದಾಖಲೆಯ ಫಲಿತಾಂಶ ಎನಿಸಿದೆ. ಶೇ 90.29 ಬಾಲಕಿಯರು ಮತ್ತು ಶೇ 81.03ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರೇಸ್ ಅಂಕಗಳ ಮೂಲಕ 40,061 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 145 ವಿದ್ಯಾರ್ಥಿಗಳು ಔಟ್​ ಆಫ್ ಔಟ್ ಅಂದರೆ, 625ಕ್ಕೆ 625 ಅಂಕ ತೆಗೆದಿದ್ದಾರೆ.

ಈ ಬಾರಿ A+ ಗ್ರೇಡ್​ನಲ್ಲಿ 1,18,875, A ಗ್ರೇಡ್​ನಲ್ಲಿ 1,82,600, B+ನಲ್ಲಿ 1,73,528, B ಗ್ರೇಡ್​ನಲ್ಲಿ 1,43,900 ಮಕ್ಕಳು ಪಾಸಾಗಿದ್ದಾರೆ. C+ನಲ್ಲಿ 87,801, C ಗ್ರೇಡ್​ನಲ್ಲಿ 14,627 ಮಕ್ಕಳು ಪಾಸಾಗಿದ್ದಾರೆ. 91ರಿಂದ 100 ಅಂಕ ಗಳಿಸಿದ್ದರೆ A+ ಗ್ರೇಡ್, 81ರಿಂದ 90 ಅಂಕ ಗಳಿಸಿದ್ದ A ಗ್ರೇಡ್, 71ರಿಂದ 80 ಅಂಕ ಗಳಿಸಿದ್ದರೆ B+ ಗ್ರೇಡ್, 61ರಿಂದ 60 ಅಂಕವಿದ್ದರೆ B ಗ್ರೇಡ್, 51ರಿಂದ 60 ಅಂಕ ಗಳಿಸಿದ್ದರೆ C+ ಹಾಗೂ 35ರಿಂದ 50 ಅಂಕ ಪಡೆದಿದ್ದರೆ C ಗ್ರೇಡ್ ಎಂದು ವಿಂಗಡಿಸಲಾಗುತ್ತದೆ.

ನೂರಕ್ಕೆ ನೂರು ಫಲಿತಾಂಶ

1462 ಸರ್ಕಾರಿ ಶಾಲೆಗಳಲ್ಲಿ ಪರೀಕ್ಷೆ ತೆಗೆದುಕೊಂಡ ಎಲ್ಲ ಮಕ್ಕಳೂ ಪಾಸಾಗಿದ್ದಾರೆ. 467 ಅನುದಾನಿತ ಶಾಲೆಗಳು ಮತ್ತು 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

Published On - 12:44 pm, Thu, 19 May 22

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ