AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC 2024 Toppers List: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಇಲ್ಲಿದೆ ಟಾಪರ್ಸ್​​ ಲಿಸ್ಟ್

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Karnataka SSLC 2024 Toppers List: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಇಲ್ಲಿದೆ ಟಾಪರ್ಸ್​​ ಲಿಸ್ಟ್
ಅಂಕಿತಾ ಬಸಪ್ಪ ಕೊನ್ನೂರು
ಗಂಗಾಧರ​ ಬ. ಸಾಬೋಜಿ
|

Updated on:May 09, 2024 | 11:36 AM

Share

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ 

  • ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ)
  • ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ
  • ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ
  • ಚಿನ್ಮಯ್ (ದಕ್ಷಿಣ ಕನ್ನಡ) 625ಕ್ಕೆ 624 ಅಂಕ
  • ಸಿದ್ದಾಂತ್ (ಚಿಕ್ಕೊಡಿ) 625ಕ್ಕೆ 624 ಅಂಕ
  • ದರ್ಶನ್ (ಶಿರಸಿ) 625ಕ್ಕೆ 624 ಅಂಕ
  • ಚಿನ್ಮಯ್ (ಶಿರಸಿ) 625ಕ್ಕೆ 624 ಅಂಕ
  • ಶ್ರೀರಾಮ್ (ಶಿರಸಿ) 625ಕ್ಕೆ 624 ಅಂಕ

ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ ಮೊದಲ ಪ್ರತಿಕ್ರೆಯೆ

ಟಿವಿ9ಗೆ ಎಸ್​ಎಸ್​ಎಲ್​ಸಿ ಟಾಪರ್​ ಅಂಕಿತಾ ಕೊನ್ನೂರು ಪ್ರತಿಕ್ರಿಯಿಸಿದ್ದು, ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ನಾನು ಐಎಎಸ್​ ಮಾಡುವ ಕನಸು ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka SSLC Result 2024 Live: ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

ಬೆಂಗಳೂರಿನ ವಿದ್ಯಾರ್ಥಿಗಳು ಕೂಡ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ರಾಜಾಜಿನಗರದ ವಿವಿಎಸ್ ಸರ್ದಾರ್ ಪಟೇಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.​ ಅಂಕಿತಾ ಹಾಗೂ ಸೌರವ್ ಕೌಶಿಕ್​ಗೆ ತಲಾ 623 ಅಂಕಗಳು ಬಂದಿವೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಶಿಕ್ಷಕರು ಮತ್ತು ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: Karnataka SSLC District Wise Result 2024: ಉಡುಪಿಗೆ ಪ್ರಥಮ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

44ನೇ ಬ್ಯಾಚ್ 100% ರಿಸಲ್ಟ್ ಬಂದಿರುವುದು ಸಂತಸ ತಂದಿದೆ. ಮಕ್ಕಳಿಗೆ ನಾವು ಉತ್ತಮವಾಗಿ ಪಾಠಗಳನ್ನ ಒದಗಿಸುತ್ತಿದ್ದೇವೆ ಎಂದು ವಿವಿಎಸ್ ಹೈಸ್ಕೂಲ್ ಪ್ರಾಶುಂಪಾಲೆ ವಾಣಿಶ್ರಿ ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:10 am, Thu, 9 May 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ