AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result: ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು.

Karnataka SSLC Result: ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!
ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!
Vinay Kashappanavar
| Edited By: |

Updated on: May 09, 2024 | 12:29 PM

Share

ಬೆಂಗಳೂರು, ಮೇ 9: ಎಸ್‌ಎಸ್‌ಎಲ್‌ಸಿ 2023-24ನೇ ಸಾಲಿನ ಫಲಿತಾಂಶ (SSLC Result) ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ 10ರಷ್ಟು ಕಡಿಮೆ ಫಲಿತಾಂಶ ದಾಖಲಾಗಿದೆ. ಶೇ 20ರಷ್ಟು ಗ್ರೇಸ್ ಮಾರ್ಕ್ (Grace Marks) ನೀಡಿದ ಹೊರತಾಗಿಯೂ ಕಡಿಮೆ ಫಲಿತಾಂಶ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆಗೆ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಆದಾಗ್ಯೂ ಫಲಿತಾಂಶದ ಪ್ರಮಾಣ ಇಳಿಕೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ.

ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಉಡುಪಿ ಜಿಲ್ಲೆ ಶೇ 94ರ ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ ಯಾದಗಿರಿ ಜಿಲ್ಲೆ ಶೇ 50.59 ರ ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಟಾಪರ್ ಅಂಕಿತಾಗೆ ಬಾಗಲಕೋಟೆ ಡಿಸಿ ಅಭಿನಂದನೆ

625ಕ್ಕೆ 625 ಅಂಕ ಗಳಿಸಿರುವ ಅಂಕಿತಾ ಬಸಪ್ಪ ಕೊನ್ನೂರುಗೆ ಬಾಗಲಕೋಟೆ ಡಿಸಿ ಕೆ.ಎಂ.ಜಾನಕಿ ಅಭಿನಂದನೆ ಸಲ್ಲಿಸಿದ್ದಾರೆ. ಅಂಕಿತಾ 625ಕ್ಕೆ 625 ಅಂಕ ಪಡೆದು ಜಿಲ್ಲೆಯ ಪ್ರತಿಷ್ಠೆ ಹೆಚ್ಚಿಸಿದ್ದಾಳೆ. ಅವಳ ಪ್ರಯತ್ನಕ್ಕೆ ಜಿಲ್ಲಾಡಳಿತದಿಂದ ಹೃತ್ಪೂರ್ವಕ ಶುಭಾಶಯ ಹೇಳುವೆ. ಅಂಕಿತಾ ಸಾಧನೆ ಈಗ 9ನೇ ತರಗತಿ ಓದುತ್ತಿರುವ ಹಾಗೂ ಹೈಸ್ಕೂಲ್ ಮಕ್ಕಳಿಗೆ ಪ್ರೇರಣೆ ಆಗಿದೆ. ಅವಳ ಸಾಧನೆಯಿಂದ ಸ್ಪೂರ್ತಿ ಪಡೆದು, ಅವರೂ ಸಹ ಉತ್ತಮ ಸಾಧನೆ ಮಾಡಲಿದ್ದಾರೆ. ಅಂಕಿತಾರ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಕುಟುಂಬದ ಜೊತೆ ಜಿಲ್ಲಾಡಳಿತ ಸಹ ಸಹಕಾರ ನೀಡಲಿದೆ. ಮುಂದಿನ ವಿದ್ಯಾಭ್ಯಾಸ ಹೀಗೆಯೇ ಅಗ್ರಗಣ್ಯವಾಗಿರಲಿ. ಅವಳ ಕನಸು ನನಸಾಗಲು ಪ್ರಯತ್ನ ಹೀಗೆಯೇ ಸಾಗಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:  SSLC ಫಲಿತಾಂಶ ಪ್ರಕಟ, ರಿಸಲ್ಟ್​​​ ನೋಡಲು ಈ ವೆಬ್​ ಸೈಟ್​​​ಗಳಿಗೆ ಭೇಟಿ ನೀಡಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್