AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result: ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು.

Karnataka SSLC Result: ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!
ಶೇ 20ರಷ್ಟು ಗ್ರೇಸ್ ಮಾರ್ಕ್ ಕೊಟ್ಟರೂ ಕಡಿಮೆ ಫಲಿತಾಂಶ!
Vinay Kashappanavar
| Updated By: Ganapathi Sharma|

Updated on: May 09, 2024 | 12:29 PM

Share

ಬೆಂಗಳೂರು, ಮೇ 9: ಎಸ್‌ಎಸ್‌ಎಲ್‌ಸಿ 2023-24ನೇ ಸಾಲಿನ ಫಲಿತಾಂಶ (SSLC Result) ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ 10ರಷ್ಟು ಕಡಿಮೆ ಫಲಿತಾಂಶ ದಾಖಲಾಗಿದೆ. ಶೇ 20ರಷ್ಟು ಗ್ರೇಸ್ ಮಾರ್ಕ್ (Grace Marks) ನೀಡಿದ ಹೊರತಾಗಿಯೂ ಕಡಿಮೆ ಫಲಿತಾಂಶ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆಗೆ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಆದಾಗ್ಯೂ ಫಲಿತಾಂಶದ ಪ್ರಮಾಣ ಇಳಿಕೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ.

ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಉಡುಪಿ ಜಿಲ್ಲೆ ಶೇ 94ರ ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ ಯಾದಗಿರಿ ಜಿಲ್ಲೆ ಶೇ 50.59 ರ ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಟಾಪರ್ ಅಂಕಿತಾಗೆ ಬಾಗಲಕೋಟೆ ಡಿಸಿ ಅಭಿನಂದನೆ

625ಕ್ಕೆ 625 ಅಂಕ ಗಳಿಸಿರುವ ಅಂಕಿತಾ ಬಸಪ್ಪ ಕೊನ್ನೂರುಗೆ ಬಾಗಲಕೋಟೆ ಡಿಸಿ ಕೆ.ಎಂ.ಜಾನಕಿ ಅಭಿನಂದನೆ ಸಲ್ಲಿಸಿದ್ದಾರೆ. ಅಂಕಿತಾ 625ಕ್ಕೆ 625 ಅಂಕ ಪಡೆದು ಜಿಲ್ಲೆಯ ಪ್ರತಿಷ್ಠೆ ಹೆಚ್ಚಿಸಿದ್ದಾಳೆ. ಅವಳ ಪ್ರಯತ್ನಕ್ಕೆ ಜಿಲ್ಲಾಡಳಿತದಿಂದ ಹೃತ್ಪೂರ್ವಕ ಶುಭಾಶಯ ಹೇಳುವೆ. ಅಂಕಿತಾ ಸಾಧನೆ ಈಗ 9ನೇ ತರಗತಿ ಓದುತ್ತಿರುವ ಹಾಗೂ ಹೈಸ್ಕೂಲ್ ಮಕ್ಕಳಿಗೆ ಪ್ರೇರಣೆ ಆಗಿದೆ. ಅವಳ ಸಾಧನೆಯಿಂದ ಸ್ಪೂರ್ತಿ ಪಡೆದು, ಅವರೂ ಸಹ ಉತ್ತಮ ಸಾಧನೆ ಮಾಡಲಿದ್ದಾರೆ. ಅಂಕಿತಾರ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಕುಟುಂಬದ ಜೊತೆ ಜಿಲ್ಲಾಡಳಿತ ಸಹ ಸಹಕಾರ ನೀಡಲಿದೆ. ಮುಂದಿನ ವಿದ್ಯಾಭ್ಯಾಸ ಹೀಗೆಯೇ ಅಗ್ರಗಣ್ಯವಾಗಿರಲಿ. ಅವಳ ಕನಸು ನನಸಾಗಲು ಪ್ರಯತ್ನ ಹೀಗೆಯೇ ಸಾಗಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:  SSLC ಫಲಿತಾಂಶ ಪ್ರಕಟ, ರಿಸಲ್ಟ್​​​ ನೋಡಲು ಈ ವೆಬ್​ ಸೈಟ್​​​ಗಳಿಗೆ ಭೇಟಿ ನೀಡಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ