AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ 2026: ಹಿಂದಿ ಪರೀಕ್ಷೆ ಸಂಬಂಧ ಉದ್ಭವಿಸಿರುವ ಹಲವು ಗೊಂದಲಗಳ ನಡುವೆ ಇದೀಗ ಎಸ್​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ ಆಗಿದೆ. ಸಚಿವ ಮಧು ಬಂಗಾರಪ್ಪನವರು ಇಂದು(ಏಪ್ರಿಲ್ 22) ಸಿಎಂ ಸಿದ್ದರಾಮಯ್ಯನವರ ಭೇಟಿ ಬಳಿಕ ರಿಸಲ್ಟ್ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಹೇಗೆ ಪರಿಶೀಲನೆ ಮಾಡುವುದು ಎನ್ನುವ ಡಿಟೇಲ್ಸ್ ಇಲ್ಲಿದೆ.

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟ
Sslc Results 2026
Vinay Kashappanavar
| Edited By: |

Updated on:Apr 23, 2026 | 12:12 PM

Share

ಬೆಂಗಳೂರು, (ಏಪ್ರಿಲ್ 22): ಹಲವು ಗೊಂದಲಗಳ ನಡುವೆಯೂ ಎಸ್​​ಎಸ್​​ಎಲ್​​ಸಿ (10ನೇ ತರಗತಿ) ಫಲಿತಾಂಶ (SSLC Result 2026) ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ.  ಇಂದು  (ಏಪ್ರಿಲ್ 23)  12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ  (Madhu bangarappa)  ಅವರು ಸಿಎಂ ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ.  ಇನ್ನು ಹಿಂದಿ ವಿಷಯ ಸಂಬಂಧ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ಸಿಎಂ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ. ಈ ಸಂಬಂಧ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಸಭೆಯಲ್ಲಿ ಹೈಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

ಏಪ್ರಿಲ್ 23 ಮಧ್ಯಾಹ್ನ 12 ಗಂಟೆ ರಿಸಲ್ಟ್​​​

ಸಿಎಂ ಭೇಟಿ ಬಳಿಕ ಮಧುಬಂಗಾರಪ್ಪ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ನಾಳೆ(ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸುತ್ತೇವೆ. ಫಲಿತಾಂಶ ಪ್ರಕಟಿಸುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದ್ದು, ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ಹೇಳುತ್ತೇವೆ ಎಂದರು.

ಅಂಕ ಸುಧಾರಣೆಗೆ ಅವಕಾಶ ನೀಡಲು ಚಿಂತನೆ

ಹೈಕೋರ್ಟ್ ಆದೇಶದಂತೆ ಗ್ರೇಡ್ ಬದಲುತೃತೀಯ ಭಾಷೆಯ ವಿಷಯಕ್ಕೆ ಗ್ರೇಡ ಬದಲಾಗಿ ಅಂಕ ನೀಡಲು ನಿರ್ಧಾರವಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನೆ ನೀಡಿ ಮೌಲ್ಯಮಾಪನ ಮಾಡಲಾಗಿದೆ. ಹೀಗಾಗಿ ನಾಳೆ ಅಂಕಗಳನ್ನೇ ನೀಡಲು ಇಲಾಖೆ ಮುಂದಾಗಿದೆ. ತೃತೀಯ ಭಾಷೆಯ ಅಂಕಗಳ ಸುಧಾರಣೆಗೆ ಎರಡನೇ ಪರೀಕ್ಷೆ ಅವಕಾಶ ನೀಡಲಾಗುತ್ತಿದ್ದು, ಎರಡನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಅವಕಾಶಕ್ಕೆ ಚಿಂತನೆಗಳು ನಡೆದಿವೆ. ಇದರೊಂದಿಗೆ ಯಾವುದೇ ಶುಲ್ಕ ಇಲ್ಲದೆ ಎರಡನೇ ಪರೀಕ್ಷೆ ಅಂಕ ಸುಧಾರಣೆಗೆ ಅವಕಾಶ ನೀಡಲು ಇಲಾಖೆ ಮುಂದಾಗಿದೆ.

Published On - 8:05 pm, Wed, 22 April 26

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು