Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2023: ಮೇ 14 ರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ

ಮರುಮೌಲ್ಯಮಾಪನವನ್ನು ಬಯಸುವ ವಿದ್ಯಾರ್ಥಿಗಳು ಈ ಸೂಚನೆಯನ್ನು ಗಮನಿಸಬೇಕು. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಮೇ 14 ರಿಂದ ಅರ್ಜಿ ಸಲ್ಲಿಸಬಹುದು. ಪೂರಕ ಪರೀಕ್ಷೆಗೆ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ.

Karnataka SSLC Result 2023: ಮೇ 14 ರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ
ಸಾಂದರ್ಭಿಕ ಚಿತ್ರ Image Credit source: Jagran Josh
Follow us
TV9 Web
| Updated By: ನಯನಾ ಎಸ್​ಪಿ

Updated on:May 08, 2023 | 12:38 PM

ಎಸ್​ಎಸ್​ಎಲ್​ಸಿ (2022-23ನೇ ಸಾಲಿನ) ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಕರ್ನಾಟಕ SSLC ಪರೀಕ್ಷೆ 2023 ರಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಗಳು ಲಭ್ಯವಿರುವ ಅಂಕಗಳಲ್ಲಿ ಕನಿಷ್ಠ 35% ಅನ್ನು ಪಡೆಯಬೇಕು.

ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಚಿಂತೆ ಬೇಡ, ಇಂತಹ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತಯಾರಿಯನ್ನು ಪ್ರಾರಂಭಿಸಿ. ಶೀಘ್ರದಲ್ಲಿ ಪೂರಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಇನ್ನು ಮರುಮೌಲ್ಯಮಾಪನವನ್ನು ಬಯಸುವ ವಿದ್ಯಾರ್ಥಿಗಳು ಈ ಸೂಚನೆಯನ್ನು ಗಮನಿಸಬೇಕು. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಮೇ 14 ರಿಂದ ಅರ್ಜಿ ಸಲ್ಲಿಸಬಹುದು. ಇಂದಿನಿಂದ ಮೇ 15ರವರೆಗೆ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ

ಮರುಮೌಲ್ಯಮಾಪನ ಪ್ರಕ್ರಿಯೆ

  • ಅಧಿಕೃತ ವೆಬ್‌ಸೈಟ್‌ಗೆ ಪ್ರವೇಶಿಸಿ.
  • ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿ.
  • ಕರ್ನಾಟಕ 10 ನೇ ತರಗತಿ ರೋಲ್ ಸಂಖ್ಯೆ ಮತ್ತು DOB ನಂತಹ ಅಗತ್ಯವಿರುವ ಮಾಹಿತಿಯನ್ನು ನಮೂದಿಸಿ.
  • ಅಧಿಕೃತ ಸರ್ವರ್ ವೆಬ್‌ಸೈಟ್‌ನಲ್ಲಿ ಗೋಚರಿಸುವ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
  • ಕರ್ನಾಟಕ SSLC ಮರುಮೌಲ್ಯಮಾಪನ ಫಲಿತಾಂಶ 2023 ಅನ್ನು ಪ್ರದರ್ಶಿಸಲಾಗುತ್ತದೆ. ಪಿಡಿಎಫ್ ಫೈಲ್
  • ಅನ್ನು ಡೌನ್‌ಲೋಡ್ ಮಾಡಿ ಮತ್ತು ಅದನ್ನು ಸೇವ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಡಾಕ್ಯುಮೆಂಟ್‌ನ ನಕಲನ್ನು ಮಾಡಿ.
  • ವೆಬ್‌ಸೈಟ್‌ಗಳು sslc.karnataka.gov.in  ಮತ್ತು karresults.nic.in

ಪಾವತಿ ವಿವರಗಳು

  • ಮರುಮೌಲ್ಯಮಾಪನ ಶುಲ್ಕ (ಪ್ರತಿ ವಿಷಯಕ್ಕೆ)- ರೂ. 150-250/- ಕರ್ನಾಟಕ SSLC ಅಂಕಗಳ
  • ಮರುಸಂಗ್ರಹ- ರೂ. 750/- ಪ್ರತಿ ವಿಷಯದ ಫೋಟೊಕಾಪಿಯೊಂದಿಗೆ ಮರುಪರಿಶೀಲನೆ- ರೂ. 450-550/-
  • ಫೋಟೋಕಾಪಿ ಶುಲ್ಕಗಳು (ವಿಷಯವಾರು)- ರೂ. 305/-

ಇದನ್ನೂ ಓದಿ: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

SSLC ಮರುಮೌಲ್ಯಮಾಪನ 2023 ಅರ್ಹತೆ

ಅರ್ಜಿದಾರರು ತಮ್ಮ 10 ನೇ ತರಗತಿ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮಂಡಳಿಯ ಮೂಲಕ ಪೂರ್ಣಗೊಳಿಸಿರಬೇಕು.

Published On - 11:42 am, Mon, 8 May 23

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ