AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2023: ಮೇ 14 ರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ

ಮರುಮೌಲ್ಯಮಾಪನವನ್ನು ಬಯಸುವ ವಿದ್ಯಾರ್ಥಿಗಳು ಈ ಸೂಚನೆಯನ್ನು ಗಮನಿಸಬೇಕು. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಮೇ 14 ರಿಂದ ಅರ್ಜಿ ಸಲ್ಲಿಸಬಹುದು. ಪೂರಕ ಪರೀಕ್ಷೆಗೆ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ.

Karnataka SSLC Result 2023: ಮೇ 14 ರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ
ಸಾಂದರ್ಭಿಕ ಚಿತ್ರ Image Credit source: Jagran Josh
TV9 Web
| Edited By: |

Updated on:May 08, 2023 | 12:38 PM

Share

ಎಸ್​ಎಸ್​ಎಲ್​ಸಿ (2022-23ನೇ ಸಾಲಿನ) ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಕರ್ನಾಟಕ SSLC ಪರೀಕ್ಷೆ 2023 ರಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಗಳು ಲಭ್ಯವಿರುವ ಅಂಕಗಳಲ್ಲಿ ಕನಿಷ್ಠ 35% ಅನ್ನು ಪಡೆಯಬೇಕು.

ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಚಿಂತೆ ಬೇಡ, ಇಂತಹ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತಯಾರಿಯನ್ನು ಪ್ರಾರಂಭಿಸಿ. ಶೀಘ್ರದಲ್ಲಿ ಪೂರಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಇನ್ನು ಮರುಮೌಲ್ಯಮಾಪನವನ್ನು ಬಯಸುವ ವಿದ್ಯಾರ್ಥಿಗಳು ಈ ಸೂಚನೆಯನ್ನು ಗಮನಿಸಬೇಕು. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಮೇ 14 ರಿಂದ ಅರ್ಜಿ ಸಲ್ಲಿಸಬಹುದು. ಇಂದಿನಿಂದ ಮೇ 15ರವರೆಗೆ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ

ಮರುಮೌಲ್ಯಮಾಪನ ಪ್ರಕ್ರಿಯೆ

  • ಅಧಿಕೃತ ವೆಬ್‌ಸೈಟ್‌ಗೆ ಪ್ರವೇಶಿಸಿ.
  • ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿ.
  • ಕರ್ನಾಟಕ 10 ನೇ ತರಗತಿ ರೋಲ್ ಸಂಖ್ಯೆ ಮತ್ತು DOB ನಂತಹ ಅಗತ್ಯವಿರುವ ಮಾಹಿತಿಯನ್ನು ನಮೂದಿಸಿ.
  • ಅಧಿಕೃತ ಸರ್ವರ್ ವೆಬ್‌ಸೈಟ್‌ನಲ್ಲಿ ಗೋಚರಿಸುವ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
  • ಕರ್ನಾಟಕ SSLC ಮರುಮೌಲ್ಯಮಾಪನ ಫಲಿತಾಂಶ 2023 ಅನ್ನು ಪ್ರದರ್ಶಿಸಲಾಗುತ್ತದೆ. ಪಿಡಿಎಫ್ ಫೈಲ್
  • ಅನ್ನು ಡೌನ್‌ಲೋಡ್ ಮಾಡಿ ಮತ್ತು ಅದನ್ನು ಸೇವ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಡಾಕ್ಯುಮೆಂಟ್‌ನ ನಕಲನ್ನು ಮಾಡಿ.
  • ವೆಬ್‌ಸೈಟ್‌ಗಳು sslc.karnataka.gov.in  ಮತ್ತು karresults.nic.in

ಪಾವತಿ ವಿವರಗಳು

  • ಮರುಮೌಲ್ಯಮಾಪನ ಶುಲ್ಕ (ಪ್ರತಿ ವಿಷಯಕ್ಕೆ)- ರೂ. 150-250/- ಕರ್ನಾಟಕ SSLC ಅಂಕಗಳ
  • ಮರುಸಂಗ್ರಹ- ರೂ. 750/- ಪ್ರತಿ ವಿಷಯದ ಫೋಟೊಕಾಪಿಯೊಂದಿಗೆ ಮರುಪರಿಶೀಲನೆ- ರೂ. 450-550/-
  • ಫೋಟೋಕಾಪಿ ಶುಲ್ಕಗಳು (ವಿಷಯವಾರು)- ರೂ. 305/-

ಇದನ್ನೂ ಓದಿ: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

SSLC ಮರುಮೌಲ್ಯಮಾಪನ 2023 ಅರ್ಹತೆ

ಅರ್ಜಿದಾರರು ತಮ್ಮ 10 ನೇ ತರಗತಿ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮಂಡಳಿಯ ಮೂಲಕ ಪೂರ್ಣಗೊಳಿಸಿರಬೇಕು.

Published On - 11:42 am, Mon, 8 May 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ