AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿ

2025-26ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶೇ.94.1 ದಾಖಲೆಯ ಉತ್ತೀರ್ಣತಾ ಪ್ರಮಾಣದೊಂದಿಗೆ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.98.40ರೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರೆ, ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ವಿಶೇಷವಾಗಿ, 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿ
ಪ್ರಾರ್ಥನಾ, ಪ್ರೀತಂ ಮತ್ತು ಸೌಜನ್ಯಾImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Apr 23, 2026 | 1:26 PM

Share

ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಫಲಿತಾಂಶದ ಮೂಲಕ ಕರ್ನಾಟಕ ಈ ಸಲ ಹೊಸ ದಾಖಲೆ ಬರೆದಿದೆ. ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇನ್ನು ಒಂದೆರಡಲ್ಲ ಬರೋಬ್ಬರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ.

ಹಳ್ಳಿ ಹೈದನ ಸಾಧನೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಭರತ್‌ 625ಕ್ಕೆ 625 ಅಂಕ ಪಡೆದಿದ್ದಾರೆ. ಇವರು ಬಿಲ್ಡಿಂಗ್ ಕಾಂಟ್ರ್ಯಾಕ್ಟರ್ ಆಗಿರುವ ಗಿರೀಶ್‌ರಾವ್ ಮತ್ತು ಶಿಲ್ಪಾ ದಂಪತಿಯ ಪುತ್ರ,

ವಿಜಯಪುರಕ್ಕೆ ಕೀರ್ತಿ ತಂದ ಸೌಜನ್ಯಾ

ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್​​ಫರ್ಡ್​ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಜನ್ಯಾ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಅಧಿಕಾರಿ ದರ್ಶನಗೌಡ ಪಾಟೀಲ್, ಮುಖ್ಯೋಪಾಧ್ಯಾಯ ಇಸ್ಮಾಯಿಲ್ ಮಣಿಯಾರ, ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕ ಮಂಜುನಾಥ ಮಂಕಣಿ ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ

ಉಡುಪಿಯ ಪ್ರೀತಂಗೂ ರ್ಯಾಂಕ್​

ಕುಂದಾಪುರ ತಾಲೂಕಿನ ಶಂಕರ್ ನಾರಾಯಣದ ಮದರ್ ತೆರೇಸಾ ಮೆಮೊರೇಬಲ್ ಶಂಕರ್ ನಾರಾಯಣ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್​​ ಪಡೆದಿದ್ದಾರೆ.

ಸರ್ಕಾರಿ ಶಾಲೆ ವಿದ್ಯಾರ್ಥಿನಿಯ ಸಾಧನೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಶಾಲೆಯ ಪ್ರಾರ್ಥನಾ ಬಿರಾದಾರ ಕೂಡ 625ಕ್ಕೆ 625ಅಂಕ ಪಡೆದು ನಾವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಧಿಸಿ ತೋರಿಸಿದ್ದಾಳೆ. ಪ್ರಾರ್ಥನಾಳ ಈ ಸಾಧನೆಗೆ ಕುಟುಂಬ ಮತ್ತು ಶಾಲೆ ಸಂತಸ ವ್ಯಕ್ತಪಡಿಸಿವೆ.

ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರ ಧನುಷ್​ ಮತ್ತು ರಾಯಚೂರಿನ ವಿದ್ಯಾರ್ಥಿ ಸುಖದೇವ್​​ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್​​ ಪಡೆದು ಕುಟುಂಬ ಮತ್ತು ಶಾಲೆ ಸೇರಿದಂತೆ ಊರಿಗೆ ಕೀರ್ತಿ ತಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:23 pm, Thu, 23 April 26

Follow Us