AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam 2022: ಜೂನ್​ 27ರಿಂದ ಜುಲೈ 4ವರೆಗೆ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಆರಂಭ

ನಾಳೆಯಿಂದ ಜುಲೈ 4ವರೆಗೆ ಎಸ್​​ಎಸ್​ಎಲ್​ಸಿ (SSLC) ಪೂರಕ ಪರೀಕ್ಷೆ ನಡೆಯಲಿದ್ದು, ಈ ಬಾರಿ 94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

SSLC Supplementary Exam 2022: ಜೂನ್​ 27ರಿಂದ ಜುಲೈ 4ವರೆಗೆ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಆರಂಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 26, 2022 | 3:13 PM

Share

ಬೆಂಗಳೂರು: ನಾಳೆಯಿಂದ (ಜೂನ್​ 27) ಜುಲೈ 4ವರೆಗೆ ಎಸ್​​ಎಸ್​ಎಲ್​ಸಿ (SSLC) ಪೂರಕ ಪರೀಕ್ಷೆ ನಡೆಯಲಿದ್ದು, ಈ ಬಾರಿ 94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದರು.

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊರೊನಾ ಪಿಡುಗು ವ್ಯಾಪಿಸಿದ್ದ ಕಾರಣದಿಂದಾಗಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆದಿರಲಿಲ್ಲ. ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳ ಪೈಕಿ ಶೇ 85.63ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 90.29 ಬಾಲಕಿಯರು ಮತ್ತು ಶೇ 81.03ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರೇಸ್ ಅಂಕಗಳ ಮೂಲಕ 40,061 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 145 ವಿದ್ಯಾರ್ಥಿಗಳು ಔಟ್​ ಆಫ್ ಔಟ್ ಅಂದರೆ, 625ಕ್ಕೆ 625 ಅಂಕ ತೆಗೆದಿದ್ದರು.

SSLC ಪೂರಕ ಪರೀಕ್ಷೆಯ ವೇಳಾಪಟ್ಟಿ:

ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ

ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)

ಜೂನ್ 30-ಸಮಾಜವಿಜ್ಞಾನ

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2 ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಇದನ್ನೂ ಓದಿ: TV9 Education Summit 2022, Day 3 Live: ಟಿವಿ9 ಪ್ರಸ್ತುತ ಪಡಿಸುತ್ತಿರುವ ಅತೀ ದೊಡ್ಡ ಎಜ್ಯುಕೇಷನ್​​​ ಎಕ್ಸ್​​ಪೋಗೆ ಇಂದು ಕೊನೆಯ ದಿನ

Published On - 10:59 am, Sun, 26 June 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ