AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್​, ಆಕರ್ಷಣೀಯ ವಸ್ತುಗಳಿಂದ ದೂರ ಇದ್ದಿದ್ದಕ್ಕೆ ನಾನು ಈ ಸಾಧನೆ ಮಾಡುವುದಕ್ಕಾಯ್ತು -ದರ್ಶನ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ 625ಕ್ಕೆ 624 ಅಂಕ ಗಳಿಸಿ ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾನೆ. ಮೊಬೈಲ್ ಫೋನ್ ಸೇರಿದಂತೆ ಇನ್ನಿತರ ಆಕರ್ಷಣೆಯ ವಸ್ತುಗಳಿಂದ ನಾನು ದೂರ ಇದ್ದೆ. ಹೀಗಾಗಿ ನಾನು 624 ಮಾರ್ಕ್ಸ್ ಪಡೆದಿದ್ದೇನೆ ಎಂದು ತಿಳಿಸಿದ್ದಾನೆ.

ಮೊಬೈಲ್ ಫೋನ್​, ಆಕರ್ಷಣೀಯ ವಸ್ತುಗಳಿಂದ ದೂರ ಇದ್ದಿದ್ದಕ್ಕೆ ನಾನು ಈ ಸಾಧನೆ ಮಾಡುವುದಕ್ಕಾಯ್ತು -ದರ್ಶನ್
ಎಸ್​ಎಸ್​ಎಲ್​ಸಿ ಟಾಪರ್ ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on:May 09, 2024 | 1:55 PM

Share

ಉತ್ತರ ಕನ್ನಡ, ಮೇ.09: ಎಸ್​ಎಸ್​ಎಲ್​ಸಿ ಫಲಿತಾಂಶ (SSLC Result 2024) ಹೊರಬಿದ್ದಿದೆ. ಸತತ ಪರಿಶ್ರಮಕ್ಕೆ ಫಲ ಸಿಕ್ಕ ಖುಷಿಯಲ್ಲಿ ವಿದ್ಯಾರ್ಥಿಗಳು ಮಿಂದೆದ್ದಿದ್ದಾರೆ. ನೂರಾರು ಕನಸನ್ನೇ ಹೊತ್ತು ಓದಿದವರಿಗೆ ಗೆಲವು ಸಿಕ್ಕಿದೆ. ರೈತನ ಮಗಳು ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ಇಡೀ ರಾಜ್ಯಕ್ಕೇ ಮೊದಲ ಸ್ಥಾನ ಪಡೆದು ಬೇಷ್​ ಎನಿಸಿಕೊಂಡಿದ್ದಾಳೆ. ಇನ್ನು 7 ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ ಸಿಕ್ಕಿದ್ದು ಈ ಪೈಕಿ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ ಮನೆಯಲ್ಲಿ ಹಬ್ಬದ ವಾತಾವರಣವಿದೆ. ಪೋಷಕರು ಮಗನಿಗೆ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ 625ಕ್ಕೆ 624 ಅಂಕ ಗಳಿಸಿ ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾನೆ. ದರ್ಶನ್ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಗನಿಗೆ ಸಿಹಿ ತಿನ್ನಿಸಿ ತಾಯಿ ಅಭಿನಂದಿಸಿದ್ದಾರೆ. ಇನ್ನು ಟಿವಿ9 ಜೊತೆಗೆ ತನ್ನ ಖುಷಿಯನ್ನು ಹಂಚಿಕೊಂಡ ದರ್ಶನ್, ನಾನು ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರೋದು ಖುಷಿ ತಂದಿದೆ. 624 ಮಾರ್ಕ್ಸ್ ಪಡೆಯುವುದು ತುಂಬಾ ಕಷ್ಟದ ಕೆಲಸ. ಈ ಖುಷಿ ಸಂದರ್ಭದಲ್ಲಿ ನನ್ನ ಗುರುಗಳು ಮತ್ತು ತಂದೆ ತಾಯಿನಾ ನಾನು ನೆನಪಿಸಿಕೊಳ್ತೀನಿ. ಗುರುಗಳು ಮತ್ತು ತಂದೆ ತಾಯಿಯ ಸಹಕಾರ ಇಲ್ಲದೆ ನಾನು ಸಾಧನೆ ಮಾಡುವುದಕ್ಕೆ ಆಗುತ್ತಿರಲಿಲ್ಲ. ಶಾಲೆಯಲ್ಲಿ ಹೇಳಿದ ಹೋಮ್ ವರ್ಕ್ ನಾನು ತಪ್ಪದೇ ಮಾಡುತ್ತಿದ್ದೆ. ಯಾವುದೇ ವಿಷಯವನ್ನು ಓದುವಾಗ ಫೋಕಸ್ ಕೊಟ್ಟು ಓದುತ್ತಿದ್ದೆ. ಮೊಬೈಲ್ ಫೋನ್ ಸೇರಿದಂತೆ ಇನ್ನಿತರ ಆಕರ್ಷಣೆಯ ವಸ್ತುಗಳಿಂದ ನಾನು ದೂರ ಇದ್ದೆ. ಹೀಗಾಗಿ ನಾನು 624 ಮಾರ್ಕ್ಸ್ ಪಡೆದಿದ್ದೇನೆ ಎಂದು ದರ್ಶನ್ ತಿಳಿಸಿದ್ದಾನೆ.

ಇದನ್ನೂ ಓದಿ:ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಪೋಷಕರ ಹುಡುಕಾಟ

ಕಳೆದ ಬಾರಿಯಂತೆ ಈ ಬಾರಿಯೂ ಪರೀಕ್ಷೆಯಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಶೇ.10ರಷ್ಟು ಫಲಿತಾಂಶ ಕುಸಿದಿದೆ. ಪರೀಕ್ಷಾ ಮಂಡಳಿ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡ್ಬೋದಾಗಿದೆ. ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್ ಆಗಿದ್ದು, 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:07 pm, Thu, 9 May 24

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್