AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್​, ಆಕರ್ಷಣೀಯ ವಸ್ತುಗಳಿಂದ ದೂರ ಇದ್ದಿದ್ದಕ್ಕೆ ನಾನು ಈ ಸಾಧನೆ ಮಾಡುವುದಕ್ಕಾಯ್ತು -ದರ್ಶನ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ 625ಕ್ಕೆ 624 ಅಂಕ ಗಳಿಸಿ ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾನೆ. ಮೊಬೈಲ್ ಫೋನ್ ಸೇರಿದಂತೆ ಇನ್ನಿತರ ಆಕರ್ಷಣೆಯ ವಸ್ತುಗಳಿಂದ ನಾನು ದೂರ ಇದ್ದೆ. ಹೀಗಾಗಿ ನಾನು 624 ಮಾರ್ಕ್ಸ್ ಪಡೆದಿದ್ದೇನೆ ಎಂದು ತಿಳಿಸಿದ್ದಾನೆ.

ಮೊಬೈಲ್ ಫೋನ್​, ಆಕರ್ಷಣೀಯ ವಸ್ತುಗಳಿಂದ ದೂರ ಇದ್ದಿದ್ದಕ್ಕೆ ನಾನು ಈ ಸಾಧನೆ ಮಾಡುವುದಕ್ಕಾಯ್ತು -ದರ್ಶನ್
ಎಸ್​ಎಸ್​ಎಲ್​ಸಿ ಟಾಪರ್ ದರ್ಶನ್
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು

Updated on:May 09, 2024 | 1:55 PM

Share

ಉತ್ತರ ಕನ್ನಡ, ಮೇ.09: ಎಸ್​ಎಸ್​ಎಲ್​ಸಿ ಫಲಿತಾಂಶ (SSLC Result 2024) ಹೊರಬಿದ್ದಿದೆ. ಸತತ ಪರಿಶ್ರಮಕ್ಕೆ ಫಲ ಸಿಕ್ಕ ಖುಷಿಯಲ್ಲಿ ವಿದ್ಯಾರ್ಥಿಗಳು ಮಿಂದೆದ್ದಿದ್ದಾರೆ. ನೂರಾರು ಕನಸನ್ನೇ ಹೊತ್ತು ಓದಿದವರಿಗೆ ಗೆಲವು ಸಿಕ್ಕಿದೆ. ರೈತನ ಮಗಳು ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ಇಡೀ ರಾಜ್ಯಕ್ಕೇ ಮೊದಲ ಸ್ಥಾನ ಪಡೆದು ಬೇಷ್​ ಎನಿಸಿಕೊಂಡಿದ್ದಾಳೆ. ಇನ್ನು 7 ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ ಸಿಕ್ಕಿದ್ದು ಈ ಪೈಕಿ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ ಮನೆಯಲ್ಲಿ ಹಬ್ಬದ ವಾತಾವರಣವಿದೆ. ಪೋಷಕರು ಮಗನಿಗೆ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ದರ್ಶನ್ 625ಕ್ಕೆ 624 ಅಂಕ ಗಳಿಸಿ ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾನೆ. ದರ್ಶನ್ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಗನಿಗೆ ಸಿಹಿ ತಿನ್ನಿಸಿ ತಾಯಿ ಅಭಿನಂದಿಸಿದ್ದಾರೆ. ಇನ್ನು ಟಿವಿ9 ಜೊತೆಗೆ ತನ್ನ ಖುಷಿಯನ್ನು ಹಂಚಿಕೊಂಡ ದರ್ಶನ್, ನಾನು ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರೋದು ಖುಷಿ ತಂದಿದೆ. 624 ಮಾರ್ಕ್ಸ್ ಪಡೆಯುವುದು ತುಂಬಾ ಕಷ್ಟದ ಕೆಲಸ. ಈ ಖುಷಿ ಸಂದರ್ಭದಲ್ಲಿ ನನ್ನ ಗುರುಗಳು ಮತ್ತು ತಂದೆ ತಾಯಿನಾ ನಾನು ನೆನಪಿಸಿಕೊಳ್ತೀನಿ. ಗುರುಗಳು ಮತ್ತು ತಂದೆ ತಾಯಿಯ ಸಹಕಾರ ಇಲ್ಲದೆ ನಾನು ಸಾಧನೆ ಮಾಡುವುದಕ್ಕೆ ಆಗುತ್ತಿರಲಿಲ್ಲ. ಶಾಲೆಯಲ್ಲಿ ಹೇಳಿದ ಹೋಮ್ ವರ್ಕ್ ನಾನು ತಪ್ಪದೇ ಮಾಡುತ್ತಿದ್ದೆ. ಯಾವುದೇ ವಿಷಯವನ್ನು ಓದುವಾಗ ಫೋಕಸ್ ಕೊಟ್ಟು ಓದುತ್ತಿದ್ದೆ. ಮೊಬೈಲ್ ಫೋನ್ ಸೇರಿದಂತೆ ಇನ್ನಿತರ ಆಕರ್ಷಣೆಯ ವಸ್ತುಗಳಿಂದ ನಾನು ದೂರ ಇದ್ದೆ. ಹೀಗಾಗಿ ನಾನು 624 ಮಾರ್ಕ್ಸ್ ಪಡೆದಿದ್ದೇನೆ ಎಂದು ದರ್ಶನ್ ತಿಳಿಸಿದ್ದಾನೆ.

ಇದನ್ನೂ ಓದಿ:ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಪೋಷಕರ ಹುಡುಕಾಟ

ಕಳೆದ ಬಾರಿಯಂತೆ ಈ ಬಾರಿಯೂ ಪರೀಕ್ಷೆಯಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಶೇ.10ರಷ್ಟು ಫಲಿತಾಂಶ ಕುಸಿದಿದೆ. ಪರೀಕ್ಷಾ ಮಂಡಳಿ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡ್ಬೋದಾಗಿದೆ. ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್ ಆಗಿದ್ದು, 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:07 pm, Thu, 9 May 24

ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ