AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Results 2022: ನಾಳೆ ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡುವುದು ಹೇಗೆ?

ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ಪರೀಕ್ಷೆ ಬರೆದಿದ್ದ 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಣೆಯೂ ತಡವಾಯಿತು.

KCET Results 2022: ನಾಳೆ ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡುವುದು ಹೇಗೆ?
ಸಾಂದರ್ಭಿಕ ಚಿತ್ರImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 29, 2022 | 2:30 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) KCET 2022 ಪರೀಕ್ಷೆಗಳ ಫಲಿತಾಂಶಗಳನ್ನು ಶನಿವಾರ (ಜುಲೈ 30) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ. ಕೆಸಿಇಟಿ 2022ರ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inನಲ್ಲಿ ವೀಕ್ಷಿಸಬಹುದು. ಫಲಿತಾಂಶದ ಜೊತೆಗೆ ಮೆರಿಟ್ ಪಟ್ಟಿ ಕೂಡ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನದ ವೇಳೆಗೆ ಕೆಸಿಇಟಿ ಫಲಿತಾಂಶ (KCET Results) ಪ್ರಕಟವಾಗುವ ನಿರೀಕ್ಷೆಯಿದೆ.

ಈ ಮೊದಲು ಸಿಇಟಿ ಫಲಿತಾಂಶವನ್ನು ಜುಲೈ 17ರಂದೇ ಪ್ರಕಟಿಸುವುದಾಗಿ ಪರೀಕ್ಷಾ ಪ್ರಾಧಿಕಾರ ಘೋಷಿಸಿತ್ತು. ಆದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ಪರೀಕ್ಷೆ ಬರೆದಿದ್ದ 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಣೆಯೂ ತಡವಾಯಿತು.

KCET ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು?: – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.inಗೆ ಭೇಟಿ ನೀಡಿ

– ವೆಬ್​ಸೈಟ್​​ನಲ್ಲಿ ಮುಖಪುಟದಲ್ಲಿ ‘KCET ಫಲಿತಾಂಶ 2022’ ಮೇಲೆ ಕ್ಲಿಕ್ ಮಾಡಿ

– ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ

– ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ

– ರಿಸಲ್ಟ್​ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದುಕೊಳ್ಳಿ

ಇದನ್ನೂ ಓದಿ: KCET Result 2022: ಕೆಸಿಇಟಿ ಫಲಿತಾಂಶ ಇಂದೇ ಪ್ರಕಟ ಸಾಧ್ಯತೆ; ರಿಸಲ್ಟ್​ ನೋಡಲು ಹೀಗೆ ಮಾಡಿ

ಪ್ರತಿ ವರ್ಷ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ಪಶುವೈದ್ಯಕೀಯ ಮತ್ತು ಇತರ ತಾಂತ್ರಿಕ ಕೋರ್ಸ್‌ಗಳಿಗೆ ಕರ್ನಾಟಕ ರಾಜ್ಯ ಕಾಲೇಜುಗಳಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗಾಗಿ ಕೆಸಿಇಟಿ ನಡೆಯುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ವರ್ಷ ಜೂನ್ 16ರಿಂದ 18ರವರೆಗೆ ಕೆಸಿಇಟಿ ಪರೀಕ್ಷೆಯನ್ನು ನಡೆಸಿತು. ಸಿಬಿಎಸ್‌ಇ 12ನೇ ತರಗತಿಯ ಅವಧಿ 2 ಮತ್ತು ಐಸಿಎಸ್‌ಇ ಬೋರ್ಡ್ ಫಲಿತಾಂಶಗಳು ಬಿಡುಗಡೆಯಾಗುವವರೆಗೆ ಕೆಸಿಇಟಿ 2022 ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ.

‘ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ಜುಲೈ 30ರಂದು ಫಲಿತಾಂಶ ಪ್ರಕಟಿಸುತ್ತೇವೆ’ ಎಂದು ನಿನ್ನೆಯಷ್ಟೇ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಹೇಳಿದ್ದರು.

ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?