AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Result 2024: ಕೆಸಿಇಟಿ ಫಲಿತಾಂಶ ಪ್ರಕಟ; ಸೀಟು ಹಂಚಿಕೆ, ಕೌನ್ಸಲಿಂಗ್ ಯಾವಾಗ? ಇಲ್ಲಿದೆ ವಿವರ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೂ ಕೂಡ ಇನ್ನೂ 3 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಯಾಗಬೇಕಿದೆ. ಈ ಫಲಿತಾಂಶ ಬಿಡುಗಡೆ, ಕೌನ್ಸಲಿಂಗ್​, ಸೀಟು ಹಂಚಿಕೆ ಯಾವಾಗ ನಡೆಯುತ್ತದೆ? ಇಲ್ಲಿದೆ ವಿವರ

KCET Result 2024: ಕೆಸಿಇಟಿ ಫಲಿತಾಂಶ ಪ್ರಕಟ; ಸೀಟು ಹಂಚಿಕೆ, ಕೌನ್ಸಲಿಂಗ್ ಯಾವಾಗ? ಇಲ್ಲಿದೆ ವಿವರ
ಕೆಇಎ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 03, 2024 | 3:55 PM

Share

ಬೆಂಗಳೂರು, ಜೂನ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA), ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2024) ಫಲಿತಾಂಶ ಪ್ರಕಟಿಸಿದೆ. ಆದರೆ ಇನ್ನೂ 3 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಹೊರಬರಬೇಕಿದೆ. ಈ 3 ಸಾವಿರ ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗದೆ ಇರುವುದಕ್ಕೆ ಕೆಇಎ ಸ್ಪಷ್ಟನೆ ನೀಡಿದೆ. ಅದು “ಪಿಯುಸಿಯಲ್ಲಿ ನೀಡಿದ್ದ ಅಂಕಗಳನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲ ಅಭ್ಯರ್ಥಿಗಳು ತಪ್ಪಾಗಿ ನಮೂದಿಸಿದ್ದಾರೆ. ಅಂಥವರ ರ‍್ಯಾಂಕ್​ ಪ್ರಕಟಿಸಿಲ್ಲ. ಇಂತಹ ಅಭ್ಯರ್ಥಿಗಳು ಕೆಇಎ ವೆಬ್​ಸೈಟ್​ಗೆ ಭೇಟಿ ನೀಡಿ ಅಂಕಗಳನ್ನು ಮತ್ತೊಮ್ಮೆ ನಮೂದಿಸಿದರೆ, ಅವರ ರ‍್ಯಾಂಕ್ ಅನ್ನು ಒಂದೆರಡು ದಿನಗಳಲ್ಲಿ ತಿಳಿಸಲಾಗುವುದು” ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ. ಸಿಇಟಿ ಫಲಿತಾಂಶ ನಂತರ ಮುಂದೇನು? ಕೌನ್ಸಲಿಂಗ್​ ಯಾವಾಗ? ಸೀಟು ಹಂಚಿಕೆ ವಿವರ ಇಲ್ಲಿದೆ

ಕೌನ್ಸಲಿಂಗ್ ಯಾವಾಗ?

ನೀಟ್​ ಫಲಿತಾಂಶದ ನಂತರ ಮತ್ತು ಅದರ ಕೌನ್ಸಲಿಂಗ್​​ ವೇಳಾಪಟ್ಟಿ ನೋಡಿಕೊಂಡು ವೈದ್ಯಕೀಯ, ಇಂಜಿನಿಯರಿಂಗ್​ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಒಟ್ಟಿಗೆ ಕೌನ್ಸೆಲಿಂಗ್​ ನಡೆಸಲಾಗುವುದು ಎಂದು ಕೆಇಎ ತಿಳಿಸಿದೆ.

ಇದನ್ನೂ ಓದಿ: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಸೀಟು ಹಂಚಿಕೆ ಯಾವಾಗ?

ಕೆಸಿಇಟಿ 2024 ಸೀಟು ಹಂಚಿಕೆಯ ಫಲಿತಾಂಶವನ್ನು cetonline.karnataka.gov.in ನಲ್ಲಿ ಪ್ರಕಟಿಸುತ್ತದೆ. ಇನ್ನು ಸೀಟಿ ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರ ಡ್ರಾಫ್ಟ್​​ ಸೀಟ್​ ಮ್ಯಾಟ್ರಿಕ್​ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಆರಂಭಿಸಲಾಗುವುದು ಎಂದು ಕೆಇಎ ಟಿವಿ9ಗೆ ತಿಳಿಸಿದೆ.

ಸೀಟು ಹಂಚಿಕೆ ಪರಿಶೀಲಿಸುವುದು ಹೇಗೆ?

ಸೀಟು ಹಂಚಿಕೆಯನ್ನು ಅಭ್ಯರ್ಥಿಗಳು ಪರಿಶೀಲಿಸಲು ಕೆಇಎಯ ಅಧಿಕೃತ ವೆಬ್​ಸೈಟ್ kea.kar,nic.in/cetonline.karnataka.gov.in ಗೆ ಭೇಟಿ ನೀಡಿ

ಸಿಇಟಿ ಸೀಟು ಹಂಚಿಕೆ ಲಿಂಕ್​ ಅನ್ನು ಕ್ಲಿಕ್​ ಮಾಡಿ

ಈಗ, ಅಭ್ಯರ್ಥಿಗಳು ನಿಮ್ಮ ಸಿಇಟಿ ನೋಂದಣಿ ಸಂಖ್ಯೆ ನಮೂದಿಸಿ

submit ಬಟನ್​ ಮೇಲೆ ಕ್ಲಿಕ್​ ಮಾಡಿ

ಆಗ ನಿಮಗೆ ಸಿಟು ಹಂಚಿಕೆ 2024 ಕಾಣುತ್ತದೆ.

ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ಕೆಸಿಇಟಿ 2024 ಕೌನ್ಸೆಲಿಂಗ್‌ನ ಪ್ರತಿ ಸುತ್ತಿನ ನಂತರ ಕೆಇಸಿಟಿ 2024 ಸೀಟು ಹಂಚಿಕೆಯನ್ನು ಕೆಇಎ ಬಿಡುಗಡೆ ಮಾಡುತ್ತದೆ. ಸೀಟು ಹಂಚಿಕೆ ಆಗಸ್ಟ್​​​ನಲ್ಲಿ ತಾತ್ಕಾಲಿಕವಾಗಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ದಾಖಲಾತಿ ಪರಿಶೀಲನೆ ಹೇಗೆ?

ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್​ ಲೈನ್​ನಲ್ಲಿ ನಡೆಯಲಿದೆ. ಕೆಇಎ ಕಚೇರಿಗೆ ಬರುವ ಅಗತ್ಯವಿಲ್ಲ, ಅಭ್ಯರ್ಥಿಗಳು ಅಪ್ಲೋಡ್​ ಮಾಡಿರುವ ಶೈಕ್ಷಣಿಕ ದಾಖಲೆಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆನ್​ ಲೈನ್​ನಲ್ಲಿ ಪರಿಶೀಲನೆ ನಡೆಸುತ್ತಾರೆ ಎಂದು ಕೆಇಎ ತಿಳಿಸಿದೆ.

ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ, ಭಾಷಾ ಅಲ್ಪಸಂಖ್ಯಾತ ಮೀಸಲಾತಿ, ಪ್ರವೇಶ ಸಂಖ್ಯೆ, ರ‍್ಯಾಂಕಿಂಗ್​​ ಪಡೆದ ಸ್ಥಾನ ಪ್ರಮಾಣ ಪತ್ರಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:26 pm, Mon, 3 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ