AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET ವಿದ್ಯಾರ್ಥಿಗಳಿಗೆ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ. ಪ್ರವೇಶ ಪತ್ರ ಡೌನ್‌ಲೋಡ್ ಹೆಸರಿನಲ್ಲಿ ಸೈಬರ್ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ
ಸಾಂದರ್ಭಿಕ ಚಿತ್ರImage Credit source: larepublica.pe
Vinay Kashappanavar
| Edited By: |

Updated on: Apr 16, 2026 | 6:55 PM

Share

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ನಕಲಿ ವೆಬ್​​ಸೈಟ್​​ ಯಾವುದು?

ಈಗಾಗಲೇ ಸಿಇಟಿ ಪರೀಕ್ಷೆಯ ದಿನಾಂಕ ನಿಗದಿ ಆಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​​ಸೈಟ್​​ನಲ್ಲಿ ವಿದ್ಯಾರ್ಥಿಗಳ ಹಾಲ್​​ ಟಿಕೆಟ್​​ ಕೂಡ ಲಭ್ಯವಿದೆ. ಏ.23 ಮತ್ತು 24ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಆದರೆ ಕೆಲ ಕಿಡಿಗೇಡಿಗಳು https://applytocollege.co/kcet_admit_card_2026 ಎಂಬ ನಕಲಿ ವೆಬ್​​ ಲಿಂಕ್​​ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದೆಂದು ಹೇಳಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪ್ರಾಧಿಕಾರ ಈ ಬಗ್ಗೆ ಎಚ್ಚರಿಕೆ ನೀಡಿದೆ. ಅಧಿಕೃತ ವೆಬ್​​ಸೈಟ್ https://cetonline.karnataka.gov.in/UGCET_Admit_Card_2026/Forms/Login.aspx​​ ಮೂಲಕವೇ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ಡೌನ್​​ಲೋಡ್​​ ಮಾಡಿಕೊಳ್ಳಬೇಕೆಂದು ತಿಳಿಸಿದೆ.

ಇದನ್ನೂ ಓದಿ: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಸತತ 2ನೇ ವರ್ಷವೂ ಶುಲ್ಕ ಏರಿಕೆ

ಪರೀಕ್ಷೆಗೆ ಮುಂಚೆಯೇ ಸಿಇಟಿ ಪರೀಕ್ಷೆ ಬರೆಯುವವರ ಮೇಲೆ ಸೈಬರ್​ ಕಿರಾತಕರು ಕಣ್ಣು ಹಾಕಿದ್ದು, ನಕಲಿ ವೆಬ್​ಸೈಟ್​​ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯ ಇಲ್ಲ. ಹೀಗಾಗಿ ಎಚ್ಚರವಹಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?