AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ

ಯುಜಿಸಿಇಟಿ-ನೀಟ್​ ಕೋರ್ಸ್​ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್​ ಮೂಲಕ ದಾಖಲು ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ
ಕೆಇಎ
Vinay Kashappanavar
| Edited By: |

Updated on:Sep 04, 2024 | 8:05 AM

Share

ಬೆಂಗಳೂರು, ಸೆಪ್ಟೆಂಬರ್​ 04: ವೈದ್ಯಕೀಯ, ಎಂಜಿನೀಯರಿಂಗ್​ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ (Choice)​ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ (Online Payment) ಜಾರಿ ಮಾಡಿದೆ.

ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್​ ಬ್ಯಾಂಕಿಂಗ್​, ಡೆಬಿಟ್​/ ಕ್ರೆಡಿಟ್​ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ.​ ಯುಜಿಸಿಇಟಿ-ನೀಟ್​ (UGCET-NEET) ಕೋರ್ಸ್​ಗಳಿಗೆ​ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್​ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಅಥವಾ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಹೃದಯಘಾತ ಪ್ರಕರಣ ಹೆಚ್ಚಳ: ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ!

ಸೆಪ್ಟೆಂಬರ್​ 5 ದಾಖಲಾತಿಗೆ ಡೆಡ್ ಲೈನ್ ಇದೆ. ಆದರೆ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜು ದಾಖಲಾತಿಗೆ ಪೋಷಕರಿಗೆ ಸರ್ವರ್ ಸಮಸ್ಯೆ ಎದುರಾಗಿದೆ. ಗಣೇಶ ಹಬ್ಬ ಹಾಗೂ ಕಡಿಮೆ ಅವಧಿ ಹಿನ್ನೆಲೆಯಲ್ಲಿ ದೂರದ ಬೆಳಾಗವಿ, ಕಲುಬುರಗಿ ಬೀದರ್​ನಿಂದ ಬರುವ ಪೋಷಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿಗೆ ಬಂದು ಚಲನ್ ಪಡೆದು ಬ್ಯಾಂಕಿಗೆ ಹಣ ಕಟ್ಟಿ ಮತ್ತೆ ಕಾಲೇಜಿಗೆ ಹೋಗಿ ದಾಖಲಾತಿ ಪಡೆದುಕೊಳ್ಳುವುದು ಕಷ್ಟವಾಗಿದೆ. ಇದರ ಜೊತೆಗೆ ಚಲನ್ ಡೌನ್​ಲೋಡ್​ಗೆ ಕೆಇಎನಲ್ಲಿ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮಕ್ಕಳ ದಾಖಲಾತಿಗೆ ಪೋಷಕರು ಪರದಾಡುವಂತಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್​ಲೈನ್ ಪಾವತಿ ಜಾರಿ ಮಾಡಿ ದಾಖಲಾತಿ ಸುಲಭ ಮಾಡಿದೆ. ಆದರೆ ಕೆಲ ಪೋಷಕರಿಗೆ ಸರ್ವರ್ ಕೈ ಕೊಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 4 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ