AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ

ಯುಜಿಸಿಇಟಿ-ನೀಟ್​ ಕೋರ್ಸ್​ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್​ ಮೂಲಕ ದಾಖಲು ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ
ಕೆಇಎ
Vinay Kashappanavar
| Edited By: |

Updated on:Sep 04, 2024 | 8:05 AM

Share

ಬೆಂಗಳೂರು, ಸೆಪ್ಟೆಂಬರ್​ 04: ವೈದ್ಯಕೀಯ, ಎಂಜಿನೀಯರಿಂಗ್​ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ (Choice)​ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ (Online Payment) ಜಾರಿ ಮಾಡಿದೆ.

ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್​ ಬ್ಯಾಂಕಿಂಗ್​, ಡೆಬಿಟ್​/ ಕ್ರೆಡಿಟ್​ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ.​ ಯುಜಿಸಿಇಟಿ-ನೀಟ್​ (UGCET-NEET) ಕೋರ್ಸ್​ಗಳಿಗೆ​ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್​ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಅಥವಾ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಹೃದಯಘಾತ ಪ್ರಕರಣ ಹೆಚ್ಚಳ: ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ!

ಸೆಪ್ಟೆಂಬರ್​ 5 ದಾಖಲಾತಿಗೆ ಡೆಡ್ ಲೈನ್ ಇದೆ. ಆದರೆ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜು ದಾಖಲಾತಿಗೆ ಪೋಷಕರಿಗೆ ಸರ್ವರ್ ಸಮಸ್ಯೆ ಎದುರಾಗಿದೆ. ಗಣೇಶ ಹಬ್ಬ ಹಾಗೂ ಕಡಿಮೆ ಅವಧಿ ಹಿನ್ನೆಲೆಯಲ್ಲಿ ದೂರದ ಬೆಳಾಗವಿ, ಕಲುಬುರಗಿ ಬೀದರ್​ನಿಂದ ಬರುವ ಪೋಷಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿಗೆ ಬಂದು ಚಲನ್ ಪಡೆದು ಬ್ಯಾಂಕಿಗೆ ಹಣ ಕಟ್ಟಿ ಮತ್ತೆ ಕಾಲೇಜಿಗೆ ಹೋಗಿ ದಾಖಲಾತಿ ಪಡೆದುಕೊಳ್ಳುವುದು ಕಷ್ಟವಾಗಿದೆ. ಇದರ ಜೊತೆಗೆ ಚಲನ್ ಡೌನ್​ಲೋಡ್​ಗೆ ಕೆಇಎನಲ್ಲಿ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮಕ್ಕಳ ದಾಖಲಾತಿಗೆ ಪೋಷಕರು ಪರದಾಡುವಂತಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್​ಲೈನ್ ಪಾವತಿ ಜಾರಿ ಮಾಡಿ ದಾಖಲಾತಿ ಸುಲಭ ಮಾಡಿದೆ. ಆದರೆ ಕೆಲ ಪೋಷಕರಿಗೆ ಸರ್ವರ್ ಕೈ ಕೊಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 4 September 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​