AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ

ಯುಜಿಸಿಇಟಿ-ನೀಟ್​ ಕೋರ್ಸ್​ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್​ ಮೂಲಕ ದಾಖಲು ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ
ಕೆಇಎ
Vinay Kashappanavar
| Edited By: |

Updated on:Sep 04, 2024 | 8:05 AM

Share

ಬೆಂಗಳೂರು, ಸೆಪ್ಟೆಂಬರ್​ 04: ವೈದ್ಯಕೀಯ, ಎಂಜಿನೀಯರಿಂಗ್​ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ (Choice)​ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ (Online Payment) ಜಾರಿ ಮಾಡಿದೆ.

ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್​ ಬ್ಯಾಂಕಿಂಗ್​, ಡೆಬಿಟ್​/ ಕ್ರೆಡಿಟ್​ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ.​ ಯುಜಿಸಿಇಟಿ-ನೀಟ್​ (UGCET-NEET) ಕೋರ್ಸ್​ಗಳಿಗೆ​ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್​ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಅಥವಾ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಹೃದಯಘಾತ ಪ್ರಕರಣ ಹೆಚ್ಚಳ: ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ!

ಸೆಪ್ಟೆಂಬರ್​ 5 ದಾಖಲಾತಿಗೆ ಡೆಡ್ ಲೈನ್ ಇದೆ. ಆದರೆ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜು ದಾಖಲಾತಿಗೆ ಪೋಷಕರಿಗೆ ಸರ್ವರ್ ಸಮಸ್ಯೆ ಎದುರಾಗಿದೆ. ಗಣೇಶ ಹಬ್ಬ ಹಾಗೂ ಕಡಿಮೆ ಅವಧಿ ಹಿನ್ನೆಲೆಯಲ್ಲಿ ದೂರದ ಬೆಳಾಗವಿ, ಕಲುಬುರಗಿ ಬೀದರ್​ನಿಂದ ಬರುವ ಪೋಷಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿಗೆ ಬಂದು ಚಲನ್ ಪಡೆದು ಬ್ಯಾಂಕಿಗೆ ಹಣ ಕಟ್ಟಿ ಮತ್ತೆ ಕಾಲೇಜಿಗೆ ಹೋಗಿ ದಾಖಲಾತಿ ಪಡೆದುಕೊಳ್ಳುವುದು ಕಷ್ಟವಾಗಿದೆ. ಇದರ ಜೊತೆಗೆ ಚಲನ್ ಡೌನ್​ಲೋಡ್​ಗೆ ಕೆಇಎನಲ್ಲಿ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮಕ್ಕಳ ದಾಖಲಾತಿಗೆ ಪೋಷಕರು ಪರದಾಡುವಂತಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್​ಲೈನ್ ಪಾವತಿ ಜಾರಿ ಮಾಡಿ ದಾಖಲಾತಿ ಸುಲಭ ಮಾಡಿದೆ. ಆದರೆ ಕೆಲ ಪೋಷಕರಿಗೆ ಸರ್ವರ್ ಕೈ ಕೊಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 4 September 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ