Sign In

By signing in or creating an account, you agree with Associated Broadcasting Company's Terms & Conditions and Privacy Policy.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ

ಯುಜಿಸಿಇಟಿ-ನೀಟ್​ ಕೋರ್ಸ್​ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್​ ಮೂಲಕ ದಾಖಲು ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ
ಕೆಇಎ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Sep 04, 2024 | 8:05 AM

ಬೆಂಗಳೂರು, ಸೆಪ್ಟೆಂಬರ್​ 04: ವೈದ್ಯಕೀಯ, ಎಂಜಿನೀಯರಿಂಗ್​ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ (Choice)​ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ (Online Payment) ಜಾರಿ ಮಾಡಿದೆ.

ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್​ ಬ್ಯಾಂಕಿಂಗ್​, ಡೆಬಿಟ್​/ ಕ್ರೆಡಿಟ್​ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ.​ ಯುಜಿಸಿಇಟಿ-ನೀಟ್​ (UGCET-NEET) ಕೋರ್ಸ್​ಗಳಿಗೆ​ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್​ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಅಥವಾ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಹೃದಯಘಾತ ಪ್ರಕರಣ ಹೆಚ್ಚಳ: ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ!

ಸೆಪ್ಟೆಂಬರ್​ 5 ದಾಖಲಾತಿಗೆ ಡೆಡ್ ಲೈನ್ ಇದೆ. ಆದರೆ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜು ದಾಖಲಾತಿಗೆ ಪೋಷಕರಿಗೆ ಸರ್ವರ್ ಸಮಸ್ಯೆ ಎದುರಾಗಿದೆ. ಗಣೇಶ ಹಬ್ಬ ಹಾಗೂ ಕಡಿಮೆ ಅವಧಿ ಹಿನ್ನೆಲೆಯಲ್ಲಿ ದೂರದ ಬೆಳಾಗವಿ, ಕಲುಬುರಗಿ ಬೀದರ್​ನಿಂದ ಬರುವ ಪೋಷಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿಗೆ ಬಂದು ಚಲನ್ ಪಡೆದು ಬ್ಯಾಂಕಿಗೆ ಹಣ ಕಟ್ಟಿ ಮತ್ತೆ ಕಾಲೇಜಿಗೆ ಹೋಗಿ ದಾಖಲಾತಿ ಪಡೆದುಕೊಳ್ಳುವುದು ಕಷ್ಟವಾಗಿದೆ. ಇದರ ಜೊತೆಗೆ ಚಲನ್ ಡೌನ್​ಲೋಡ್​ಗೆ ಕೆಇಎನಲ್ಲಿ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮಕ್ಕಳ ದಾಖಲಾತಿಗೆ ಪೋಷಕರು ಪರದಾಡುವಂತಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್​ಲೈನ್ ಪಾವತಿ ಜಾರಿ ಮಾಡಿ ದಾಖಲಾತಿ ಸುಲಭ ಮಾಡಿದೆ. ಆದರೆ ಕೆಲ ಪೋಷಕರಿಗೆ ಸರ್ವರ್ ಕೈ ಕೊಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 4 September 24

ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್