AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ

ಯುಜಿಸಿಇಟಿ-ನೀಟ್​ ಕೋರ್ಸ್​ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್​ ಮೂಲಕ ದಾಖಲು ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.

UG CET-NEET​ ಕೋರ್ಸ್​ಗಳಿಗೆ ಮೊದಲ ದಿನ 16 ಸಾವಿರ ಮಂದಿ ದಾಖಲು, ಆನ್ ಲೈನ್ ಪಾವತಿಗೂ ಅವಕಾಶ
ಕೆಇಎ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on:Sep 04, 2024 | 8:05 AM

Share

ಬೆಂಗಳೂರು, ಸೆಪ್ಟೆಂಬರ್​ 04: ವೈದ್ಯಕೀಯ, ಎಂಜಿನೀಯರಿಂಗ್​ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ (Choice)​ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ (Online Payment) ಜಾರಿ ಮಾಡಿದೆ.

ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್​ ಬ್ಯಾಂಕಿಂಗ್​, ಡೆಬಿಟ್​/ ಕ್ರೆಡಿಟ್​ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ.​ ಯುಜಿಸಿಇಟಿ-ನೀಟ್​ (UGCET-NEET) ಕೋರ್ಸ್​ಗಳಿಗೆ​ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್​ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಅಥವಾ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಹೃದಯಘಾತ ಪ್ರಕರಣ ಹೆಚ್ಚಳ: ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ!

ಸೆಪ್ಟೆಂಬರ್​ 5 ದಾಖಲಾತಿಗೆ ಡೆಡ್ ಲೈನ್ ಇದೆ. ಆದರೆ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜು ದಾಖಲಾತಿಗೆ ಪೋಷಕರಿಗೆ ಸರ್ವರ್ ಸಮಸ್ಯೆ ಎದುರಾಗಿದೆ. ಗಣೇಶ ಹಬ್ಬ ಹಾಗೂ ಕಡಿಮೆ ಅವಧಿ ಹಿನ್ನೆಲೆಯಲ್ಲಿ ದೂರದ ಬೆಳಾಗವಿ, ಕಲುಬುರಗಿ ಬೀದರ್​ನಿಂದ ಬರುವ ಪೋಷಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿಗೆ ಬಂದು ಚಲನ್ ಪಡೆದು ಬ್ಯಾಂಕಿಗೆ ಹಣ ಕಟ್ಟಿ ಮತ್ತೆ ಕಾಲೇಜಿಗೆ ಹೋಗಿ ದಾಖಲಾತಿ ಪಡೆದುಕೊಳ್ಳುವುದು ಕಷ್ಟವಾಗಿದೆ. ಇದರ ಜೊತೆಗೆ ಚಲನ್ ಡೌನ್​ಲೋಡ್​ಗೆ ಕೆಇಎನಲ್ಲಿ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮಕ್ಕಳ ದಾಖಲಾತಿಗೆ ಪೋಷಕರು ಪರದಾಡುವಂತಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್​ಲೈನ್ ಪಾವತಿ ಜಾರಿ ಮಾಡಿ ದಾಖಲಾತಿ ಸುಲಭ ಮಾಡಿದೆ. ಆದರೆ ಕೆಲ ಪೋಷಕರಿಗೆ ಸರ್ವರ್ ಕೈ ಕೊಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 4 September 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ