AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA ಮೊದಲ ಸುತ್ತಿನ ಸೀಟು ಹಂಚಿಕೆ ಪೂರ್ಣ: ಇಂಜಿನಿಯರಿಂಗ್ ಸೇರ ಬಯಸುವವರಿಗೆ ಜುಲೈ 24 ಕೊನೆ ದಿನ; ಈ ಬಾರಿ ನಿಯಮದಲ್ಲಿ ದೊಡ್ಡ ಬದಲಾವಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ 90,748 ಸೀಟುಗಳು ಹಂಚಿಕೆಯಾಗಿವೆ, ಕೇವಲ 976 ಸೀಟುಗಳು ಖಾಲಿ ಉಳಿದಿವೆ. ಒಟ್ಟು 1,22,512 ಸೀಟುಗಳು ಹಂಚಿಕೆಯಾಗಿವೆ. ವಿದ್ಯಾರ್ಥಿಗಳು ಜುಲೈ 24ರೊಳಗೆ ವರದಿ ಮಾಡಿಕೊಳ್ಳಬೇಕು. ಈ ಬಾರಿ ಸೀಟು ಹಿಂಪಡೆಯಲು ಹೊಸ ಸೌಲಭ್ಯವನ್ನೂ ನೀಡಲಾಗಿದೆ.

KEA ಮೊದಲ ಸುತ್ತಿನ ಸೀಟು ಹಂಚಿಕೆ ಪೂರ್ಣ: ಇಂಜಿನಿಯರಿಂಗ್ ಸೇರ ಬಯಸುವವರಿಗೆ ಜುಲೈ 24 ಕೊನೆ ದಿನ; ಈ ಬಾರಿ ನಿಯಮದಲ್ಲಿ ದೊಡ್ಡ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 16, 2026 | 9:38 AM

Share

ಮುಖ್ಯಾಂಶಗಳು

  • KEA ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ
  • ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ ಮಟ್ಟದ ಸೀಟುಗಳು ಹಂಚಿಕೆ
  • ಸೀಟು ಹಿಂಪಡೆಯಲು ಈ ಬಾರಿ ಹೊಸ ಸೌಲಭ್ಯ

ಬೆಂಗಳೂರು, ಜು.16: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯ (Seat Allotment) ಫಲಿತಾಂಶವನ್ನು ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ ಮಟ್ಟದ ಸೀಟುಗಳು ಹಂಚಿಕೆಯಾಗಿರುವುದು ವಿಶೇಷವಾಗಿದೆ.

ರಾಜ್ಯಾದ್ಯಂತ ಲಭ್ಯವಿದ್ದ ಒಟ್ಟು 91,724 ಇಂಜಿನಿಯರಿಂಗ್ ಸೀಟುಗಳ ಪೈಕಿ ಬರೋಬ್ಬರಿ 90,748 ಸೀಟುಗಳು ಈಗಾಗಲೇ ಮೊದಲ ಸುತ್ತಿನಲ್ಲೇ ಹಂಚಿಕೆಯಾಗಿವೆ. ಸದ್ಯ ಕೇವಲ 976 ಸೀಟುಗಳು ಮಾತ್ರ ಖಾಲಿ ಉಳಿದುಕೊಂಡಿವೆ.ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಮತ್ತು ಫಾರ್ಮಸಿ ಕೋರ್ಸ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ನಡೆಸಲಾಗಿದೆ. ಲಭ್ಯವಿದ್ದ ಒಟ್ಟು 1,41,872 ಸೀಟುಗಳ ಪೈಕಿ 1,22,512 ಸೀಟುಗಳು ಹಂಚಿಕೆಯಾಗಿದ್ದು, 19,374 ಸೀಟುಗಳು ಖಾಲಿ ಉಳಿದಿವೆ.

ಮೊದಲ ಸುತ್ತಿನಲ್ಲಿ ಸೀಟು ಪಡೆದುಕೊಂಡ ವಿದ್ಯಾರ್ಥಿಗಳು ತಮಗೆ ಹಂಚಿಕೆಯಾಗಿರುವ ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಳ್ಳಲು ಜುಲೈ 24 ರವರೆಗೆ ಕಾಲಾವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಸೀಟುಗಳ ಆಯ್ಕೆಯನ್ನು ದಾಖಲಿಸಲು (Choice Entry) ಪ್ರತಿ ಕೋರ್ಸ್‌ಗೂ ಭಿನ್ನವಾದ ದಿನಾಂಕಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ನೆನಪಿಸಿದ್ದಾರೆ.

ಇಂಜಿನಿಯರಿಂಗ್ ಅಭ್ಯರ್ಥಿಗಳು ಜುಲೈ 16 ರಿಂದ ಚಾಯ್ಸ್ ಎಂಟ್ರಿ ಮಾಡಬಹುದು. ಕೃಷಿ ವಿಜ್ಞಾನ ಮತ್ತು ವೆಟರಿನರಿ ಅಭ್ಯರ್ಥಿಗಳು ಜುಲೈ 17 ರಿಂದ ಆಯ್ಕೆ ದಾಖಲಿಸಬಹುದು. ಯೋಗ ಮತ್ತು ನ್ಯಾಚುರೋಪತಿ ಅಭ್ಯರ್ಥಿಗಳು ಇವರಿಗೂ ಪ್ರತ್ಯೇಕ ದಿನಾಂಕಗಳನ್ನು ನೀಡಲಾಗಿದೆ.

ಇದನ್ನೂ ಓದಿ: TV9 Kannada News Live: ಫ್ಲ್ಯಾಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ, ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು; ಇಂದಿನ ಪ್ರಮುಖ ಸುದ್ದಿಗಳು

ಸೀಟು ಹಿಂಪಡೆಯಲು ಈ ಬಾರಿ ಹೊಸ ಸೌಲಭ್ಯ:

ಹಿಂದಿನ ವರ್ಷಗಳಲ್ಲಿ ಒಮ್ಮೆ ಸೀಟು ಹಂಚಿಕೆಯಾದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯನ್ನು ಬದಲಾಯಿಸಲು ಅಥವಾ ಸೀಟನ್ನು ಹಿಂಪಡೆಯಲು ಅವಕಾಶವಿರಲಿಲ್ಲ. ಆದರೆ ಈ ಬಾರಿ ವಿದ್ಯಾರ್ಥಿ ಸ್ನೇಹಿ ನಿಯಮ ತರಲಾಗಿದ್ದು, ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳು ತಮ್ಮ ಆಯ್ಕೆಯನ್ನು ಬದಲಾಯಿಸಿಕೊಳ್ಳಬಹುದು. ಉದಾಹರಣೆಗೆ, ‘Option 2’ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ