AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.

ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​
ಕೆಇಎ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Apr 26, 2025 | 6:59 PM

ಬೆಂಗಳೂರು, ಏಪ್ರಿಲ್ 26: ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ (Engineering Colleges) ನಡೆಯುವ ಸೀಟ್ ಬ್ಲಾಕಿಂಗ್ (Seet Bloking) ಎಂಬ ಕರಾಳ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮುಂದಾಗಿದ್ದು, ಈ ಬಾರಿ ಹೊಸ ತಂತ್ರ ಪ್ರಯೋಗ ಮಾಡಿದೆ. ಇಂಜಿನಿಯರಿಂಗ್ ಮಾಡಬೇಕು ಅಂತ ಕನಸು ಹೊತ್ತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಆದರೆ, ಕೊನೆ ಗಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿ ಬಿಡುತ್ತಾರೆ. ಇದೇ ಕಾರಣಕ್ಕೆ ಸೀಟ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಹೀಗಾಗಿ ಕೆಇಎ ಹೊಸ ರೂಲ್ಸ್ ತಂದಿದ್ದು, ಸೀಟ್‌ ಬ್ಲಾಕ್ ಮಾಡಿದರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ವಿದ್ಯಾರ್ಥಿಗಳ ಭವಿಷ್ಯವೆ ಹಾಳಾಗಿ ಹೋಗುತ್ತದೆ ಎಂದು ಕೆಇಎ ಎಚ್ಚರಿಕೆ ಕೊಟ್ಟಿದೆ.

ಇಂಜಿನಿಯರಿಂಗ್ ಸೀಟ್ ಪಡೆದ ವಿದ್ಯಾರ್ಥಿ, ಅಂತಿಮ ಹಂತದಲ್ಲಿ ಸೀಟ್ ರದ್ದು ಪಡಿಸಿದರೆ, 5 ಪಟ್ಟು ಹೆಚ್ಚು ಶುಲ್ಕ ಕಟ್ಟಬೇಕು. ಜೊತೆಗೆ ಸಿಇಟಿ ಪರೀಕ್ಷೆಗಳಿಂದ 3 ವರ್ಷ ವಿದ್ಯಾರ್ಥಿಯನ್ನು ಬ್ಯಾನ್ ಮಾಡಲು ಕೆಇಎ ನಿರ್ಧರಿಸಿದೆ. ಇಷ್ಟು ದಿನ ಶುಲ್ಕ ಕಟ್ಟಿದ ನಂತರ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಡೌನ್‌ಲೋಡ್​ ಮಾಡಲು ಅವಕಾಶವಿತ್ತು.

ಆದರೆ, ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕೆಇಎಗೆ ಮಾಹಿತಿ ಸಿಗುತ್ತಿರಲಿಲ್ಲ. ಇದೇ ಕಾರಣಕ್ಕೆ ಈಗ ಪ್ರವೇಶ ಪತ್ರದ ಬದಲು, ಸೀಟು ಖಚಿತತೆ ಪತ್ರ ನೀಡಲು ಕೆಇಎ ತೀರ್ಮಾನಿಸಿದೆ. ಇದರಿಂದ ವಿದ್ಯಾರ್ಥಿಗಳು ಆಯ್ಕೆಯಾದ ಕಾಲೇಜಿಗೆ ಕಡ್ಡಾಯವಾಗಿ ಹೋಗಲೇಬೇಕಾಗುತ್ತದೆ. ಒಂದು ವೇಳೆ ವಿದ್ಯಾರ್ಥಿ ಆ ಕಾಲೇಜಿಗೆ ಹೋಗದಿದ್ದರೇ ಆ ಸೀಟನ್ನು ಉಳಿಕೆ ಸೀಟು ಅಂತ ಮುಂದಿನ ಸುತ್ತಿಗೆ ಪರಿಗಣಿಸಲಾಗುತ್ತೆ.

ಇದನ್ನೂ ಓದಿ
Image
UPSC ಫಲಿತಾಂಶ: ಹಾವೇರಿ ವೈದ್ಯನಿಗೆ 41ನೇ ರ‍್ಯಾಂಕ್
Image
ಶಾಲಾ ಶುಲ್ಕ ಆಯ್ತು, ಇದೀಗ ಪಠ್ಯ ಪುಸ್ತಕಗಳ ಬೆಲೆ ಶೇ 10 ಏರಿಕೆ‌
Image
ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನ್​ ಹೇಳುತ್ತೆ
Image
SSLC Result: ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ, ನೋಡುವುದು ಹೇಗೆ?

ಇದನ್ನೂ ಓದಿ: UPSC ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಎಷ್ಟು?

ಈ ಹೊಸ ನಿಯಮದಿಂದ ಇತರೆ ಅರ್ಹ ವಿದ್ಯಾರ್ಥಿಗಳಿಗೆ ಬೇಕಾದ ಕಾಲೇಜಿನಲ್ಲಿ ಸೀಟು ಸಿಗಲು ಅವಕಾಶ ಸಿಗುತ್ತದೆ. ಆದರೆ, ಕೆಇಎ ತಂದಿರುವ ಈ ಹೊಸ ನಿಯಮದಿಂದ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Sat, 26 April 25

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO