AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂಜಿನಿಯರಿಂಗ್ ಕೋರ್ಸ್​​ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ
KEA ಆಪ್ಷನ್ ಎಂಟ್ರಿಗೆ ಅವಕಾಶ
Vinay Kashappanavar
| Edited By: |

Updated on: Aug 05, 2023 | 8:39 PM

Share

ಬೆಂಗಳೂರು, ಆಗಸ್ಟ್ 5: ಇಂಜಿನಿಯರಿಂಗ್ ಕೋರ್ಸ್​​ಗೆ (Engineering Course) ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಆಪ್ಷನ್ ಎಂಟ್ರಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್​​ಗಳಿಗೆ ಅವಕಾಶ ಇರಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯು 9,000 ಸೀಟುಗಳನ್ನು ಮತ್ತೆ ಸೇರಿಸಿದ್ದು, ಇಷ್ಟು ಸೀಟು ಹಂಚಿಕೆಗೆ ಲಭ್ಯವಿದೆ. ಇದರ ಆಪ್ಷನ್ ಎಂಟ್ರಿಗೆ ಆಗಸ್ಟ್ 9 ರವರೆಗೆ ಅವಕಾಶ ಇರಲಿದೆ. ಕೆಲವು‌ ದಾಖಲೆಗಳನ್ನು ಒದಗಿಸಿಲ್ಲ ಎನ್ನುವ ಕಾರಣಕ್ಕೆ ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು. ಬಳಿಕ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಷರತ್ತು ವಿಧಿಸಿ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಿದೆ ಎಂದರು.

ಇದನ್ನೂ ಓದಿ: ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ನಿಗದಿತ ಅವಧಿಯೊಳಗೆ ಕಾಲೇಜುಗಳಿಗೆ ಅಗತ್ಯ ಇರುವ ದಾಖಲೆಗಳನ್ನು ಒದಗಿಸಬೇಕು. ಎಲ್ಲ ಕೋರ್ಸ್‌ಗಳಿಗೆ ಆಪ್ಷನ್ ಎಂಟ್ರಿ ಮಾಡುವ ಪ್ರಕ್ರಿಯೆ ಇಂದು ಸಂಜೆ ಆರಂಭವಾಗಲಿದೆ. ಎಲ್ಲ ಕೋರ್ಸ್​​ಗಳಿಗೂ ಏಕಕಾಲದಲ್ಲಿ ಆಪ್ಷನ್ ಎಂಟ್ರಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಸೀಕ್ರೆಟ್ ಕೀ ಆನ್​ಲೈನ್ ಮೂಲಕ UGCET-23 ಪರಿಶೀಲನೆ ಕಡ್ಡಾಯವಾಗಿ ಮಾಡಬೇಕು ಎಂದರು.

ಕೋರ್ಸ್ ಸ್ಲಿಪ್ ಪಡೆದಿರುವ ಅಭ್ಯರ್ಥಿಗಳು, ವೈದ್ಯಕೀಯ ಕೋರ್ಸ್​​ಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. UG NEET-23 ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಲ್ಲಿ Secret Key ಯನ್ನು ವೈದ್ಯಕೀಯ ಕೋರ್ಸ್​​ಗಳ ಆಪ್ಷನ್ ಎಂಟ್ರಿಗೆ ಬಳಸಬೇಕು. www.kea.kar.nic.in ವೆಬ್ಸೈಟ್​ನಲ್ಲಿ KEA ಆಪ್ಷನ್ ಎಂಟ್ರಿ ಅರ್ಜಿ ಸಲ್ಲಿಸಬಹುದು ಎಂದು ರಮ್ಯಾ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!