AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂಜಿನಿಯರಿಂಗ್ ಕೋರ್ಸ್​​ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ
KEA ಆಪ್ಷನ್ ಎಂಟ್ರಿಗೆ ಅವಕಾಶ
Vinay Kashappanavar
| Edited By: |

Updated on: Aug 05, 2023 | 8:39 PM

Share

ಬೆಂಗಳೂರು, ಆಗಸ್ಟ್ 5: ಇಂಜಿನಿಯರಿಂಗ್ ಕೋರ್ಸ್​​ಗೆ (Engineering Course) ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಆಪ್ಷನ್ ಎಂಟ್ರಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್​​ಗಳಿಗೆ ಅವಕಾಶ ಇರಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯು 9,000 ಸೀಟುಗಳನ್ನು ಮತ್ತೆ ಸೇರಿಸಿದ್ದು, ಇಷ್ಟು ಸೀಟು ಹಂಚಿಕೆಗೆ ಲಭ್ಯವಿದೆ. ಇದರ ಆಪ್ಷನ್ ಎಂಟ್ರಿಗೆ ಆಗಸ್ಟ್ 9 ರವರೆಗೆ ಅವಕಾಶ ಇರಲಿದೆ. ಕೆಲವು‌ ದಾಖಲೆಗಳನ್ನು ಒದಗಿಸಿಲ್ಲ ಎನ್ನುವ ಕಾರಣಕ್ಕೆ ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು. ಬಳಿಕ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಷರತ್ತು ವಿಧಿಸಿ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಿದೆ ಎಂದರು.

ಇದನ್ನೂ ಓದಿ: ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ನಿಗದಿತ ಅವಧಿಯೊಳಗೆ ಕಾಲೇಜುಗಳಿಗೆ ಅಗತ್ಯ ಇರುವ ದಾಖಲೆಗಳನ್ನು ಒದಗಿಸಬೇಕು. ಎಲ್ಲ ಕೋರ್ಸ್‌ಗಳಿಗೆ ಆಪ್ಷನ್ ಎಂಟ್ರಿ ಮಾಡುವ ಪ್ರಕ್ರಿಯೆ ಇಂದು ಸಂಜೆ ಆರಂಭವಾಗಲಿದೆ. ಎಲ್ಲ ಕೋರ್ಸ್​​ಗಳಿಗೂ ಏಕಕಾಲದಲ್ಲಿ ಆಪ್ಷನ್ ಎಂಟ್ರಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಸೀಕ್ರೆಟ್ ಕೀ ಆನ್​ಲೈನ್ ಮೂಲಕ UGCET-23 ಪರಿಶೀಲನೆ ಕಡ್ಡಾಯವಾಗಿ ಮಾಡಬೇಕು ಎಂದರು.

ಕೋರ್ಸ್ ಸ್ಲಿಪ್ ಪಡೆದಿರುವ ಅಭ್ಯರ್ಥಿಗಳು, ವೈದ್ಯಕೀಯ ಕೋರ್ಸ್​​ಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. UG NEET-23 ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಲ್ಲಿ Secret Key ಯನ್ನು ವೈದ್ಯಕೀಯ ಕೋರ್ಸ್​​ಗಳ ಆಪ್ಷನ್ ಎಂಟ್ರಿಗೆ ಬಳಸಬೇಕು. www.kea.kar.nic.in ವೆಬ್ಸೈಟ್​ನಲ್ಲಿ KEA ಆಪ್ಷನ್ ಎಂಟ್ರಿ ಅರ್ಜಿ ಸಲ್ಲಿಸಬಹುದು ಎಂದು ರಮ್ಯಾ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್