AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIFA World Cup 2026: ಫಿಫಾ ಫೈನಲ್ ಹಿನ್ನೆಲೆಯಲ್ಲಿ ಜು. 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಕೇರಳ ಸರ್ಕಾರ!

ಕೇರಳದಲ್ಲಿ ಫುಟ್ಬಾಲ್ ಕ್ರೀಡೆಯು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ (FIFA World Cup 2026) ಮಹಾ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20 ರ ಸೋಮವಾರದಂದು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ. ಆದರೆ ಮೊದಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ.

FIFA World Cup 2026: ಫಿಫಾ ಫೈನಲ್ ಹಿನ್ನೆಲೆಯಲ್ಲಿ ಜು. 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಕೇರಳ ಸರ್ಕಾರ!
ಶಾಲೆಗಳಿಗೆ ರಜೆ ಘೋಷಣೆ
ಅಕ್ಷತಾ ವರ್ಕಾಡಿ
|

Updated on:Jul 19, 2026 | 2:50 PM

Share

ಮುಖ್ಯಾಂಶಗಳು

  • ಕೇರಳದಲ್ಲಿ ಫುಟ್ಬಾಲ್ ಕ್ರೀಡೆಯು ಕೇವಲ ಆಟವಲ್ಲ, ಅದೊಂದು ಭಾವನೆ.
  • ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ ಮಹಾ ಫೈನಲ್
  • ಅರ್ಜೆಂಟೀನಾ-ಸ್ಪೇನ್ ಫೈನಲ್ ಪಂದ್ಯಕ್ಕಾಗಿ ಜುಲೈ 20 ರಂದು ಶಾಲೆಗಳಿಗೆ ರಜೆ ಘೋಷಣೆ

ಕೇರಳಿಗರಲ್ಲಿ ಫುಟ್‌ಬಾಲ್ ಆಟದ ಮೇಲಿರುವ ಜಾಗತಿಕ ಮಟ್ಟದ ಕ್ರೇಜ್ ಮತ್ತೊಮ್ಮೆ ಸಾಬೀತಾಗಿದೆ. ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ 2026ರ (FIFA World Cup 2026) ಮಹಾ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20 ರ ಸೋಮವಾರದಂದು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಈ ಹೈ-ವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ವಿಶಿಷ್ಟ ನಿರ್ಧಾರ ಕೈಗೊಳ್ಳಲಾಗಿದೆ.

ಮಕ್ಕಳ ನಿದ್ದೆಗೆಡಿಸಲಿರುವ ‘ಮೆಸ್ಸಿ ವರ್ಸಸ್ ಸ್ಪೇನ್’ ಕದನ:

ಹಾಲಿ ಚಾಂಪಿಯನ್ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಹಾಗೂ ಯುರೋಪ್ ಚಾಂಪಿಯನ್ ಸ್ಪೇನ್ ನಡುವಿನ ಪ್ರಶಸ್ತಿ ಸಮರವು ಭಾರತೀಯ ಕಾಲಮಾನ (IST) ಭಾನುವಾರ ಮಧ್ಯರಾತ್ರಿ 12:30 ಕ್ಕೆ ಆರಂಭವಾಗಲಿದೆ. ಈ ರೋಮಾಂಚಕ ಪಂದ್ಯ ಮುಕ್ತಾಯಗೊಳ್ಳಲು ಮುಂಜಾನೆವರೆಗೂ ಸಮಯ ಹಿಡಿಯಲಿದ್ದು, ಆ ಬಳಿಕ ವಿಜೇತ ತಂಡದ ಅಭಿಮಾನಿಗಳು ರಸ್ತೆಗಳಲ್ಲಿ ಸಂಭ್ರಮಾಚರಣೆ ನಡೆಸಲಿದ್ದಾರೆ. ಪಂದ್ಯದ ಪ್ರಸಾರದ ಸಮಯದಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ತಡರಾತ್ರಿಯವರೆಗೆ ಎಚ್ಚರವಿರಬೇಕಾಗುತ್ತದೆ. ಇದರಿಂದ ಸೋಮವಾರದ ದಿನಚರಿಗೆ ತೊಂದರೆಯಾಗಲಿದೆ ಎಂಬುದನ್ನು ಮನಗಂಡು ಈ ರಜೆ ನೀಡಲಾಗಿದೆ.

“ಖುಷಿನಾ ಮಕ್ಕಳೇ?” – ಸೋಷಿಯಲ್ ಮೀಡಿಯಾದಲ್ಲಿ ಸಚಿವರ ಪೋಸ್ಟ್:

ಸಾರ್ವಜನಿಕ ಶಿಕ್ಷಣ ಇಲಾಖೆಯ ಸಚಿವ ಎನ್. ಶಂಶುದ್ದೀನ್ ಅವರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾ, “ಈಗ ಖುಷಿನಾ ಮಕ್ಕಳೇ?” ಎಂದು ಪ್ರೀತಿಯಿಂದ ಪ್ರಶ್ನಿಸಿದ್ದಾರೆ. ಫುಟ್‌ಬಾಲ್ ಪ್ರೇಮಿಗಳಾದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಂಘಟನೆಗಳಿಂದ ಬಂದ ವ್ಯಾಪಕ ಮನವಿಗಳನ್ನು ಪುರಸ್ಕರಿಸಿ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರ ಕಚೇರಿಯು ಈ ಆದೇಶ ಹೊರಡಿಸಿದೆ. ಮಾಜಿ ಶಿಕ್ಷಣ ಸಚಿವರಾದ ವಿ. ಶಿವನ್‌ಕುಟ್ಟಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಹ ತಡರಾತ್ರಿಯ ಪಂದ್ಯದ ನಂತರ ಮಕ್ಕಳಿಗೆ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ರಜೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಫಿಫಾ ವಿಶ್ವಕಪ್ ಫೈನಲ್​ನ 21 ರೋಚಕ ಸಂಗತಿಗಳು ನಿಮಗೆ ಗೊತ್ತೇ?

ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ:

ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿದ್ದರೂ, ಸೋಮವಾರ (ಜುಲೈ 20) ಮೊದಲೇ ನಿಗದಿಯಾಗಿರುವ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ (CMO) ಸ್ಪಷ್ಟಪಡಿಸಿದೆ. ಪರೀಕ್ಷೆಗಳು ಎಂದಿನಂತೆ ಜರುಗಲಿವೆ. ರಜೆಯಿಂದಾಗಿ ನಷ್ಟವಾಗುವ ಶೈಕ್ಷಣಿಕ ದಿನವನ್ನು ಸರಿದೂಗಿಸಲು ಮುಂದಿನ ಯಾವುದಾದರೊಂದು ಶನಿವಾರವನ್ನು ಕೆಲಸದ ದಿನವನ್ನಾಗಿ ಪರಿವರ್ತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಕೇರಳದಾದ್ಯಂತ ಹಬ್ಬದ ವಾತಾವರಣ:

ಕೇರಳದಲ್ಲಿ ಫುಟ್‌ಬಾಲ್ ಜ್ವರ ನೆತ್ತಿಗೇರಿದ್ದು, ಇಡೀ ರಾಜ್ಯದಲ್ಲಿ ಹಬ್ಬದ ಸಡಗರ ಮನೆಮಾಡಿದೆ. ವಿವಿಧ ಸ್ಪೋರ್ಟ್ಸ್ ಕ್ಲಬ್‌ಗಳು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸಾರ್ವಜನಿಕ ಮೈದಾನಗಳು ಹಾಗೂ ಪಾರ್ಕ್‌ಗಳಲ್ಲಿ ಪಂದ್ಯದ ನೇರ ಪ್ರಸಾರ ವೀಕ್ಷಣೆಗಾಗಿ ಬೃಹತ್ ಗಾತ್ರದ ಎಲ್‌ಇಡಿ (LED) ಪರದೆಗಳನ್ನು ಅಳವಡಿಸಿವೆ. ತಿರುವನಂತಪುರಂ ಹಾಗೂ ಕೊಚ್ಚಿಯಂತಹ ನಗರಗಳಲ್ಲಿ ಅಭಿಮಾನಿಗಳ ಬೃಹತ್ ಕಟೌಟ್‌ಗಳು ರಾರಾಜಿಸುತ್ತಿವೆ. ಅಭಿಮಾನಿಗಳ ಸಾಗರವೇ ಹರಿದುಬರುವ ನಿರೀಕ್ಷೆ ಇರುವುದರಿಂದ ಮತ್ತು ಭದ್ರತೆಯ ದೃಷ್ಟಿಯಿಂದ ಕೇರಳ ಪೊಲೀಸರು ಕಟ್ಟುನಿಟ್ಟಿನ ಕಣ್ಗಾವಲು ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Sun, 19 July 26

Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು