AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ವಿವಿಯ ಲಾಂಛನ ಅನಾವರಣಗೊಳಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನಾವರಣಗೊಳಿಸಿದರು.

ಕೊಪ್ಪಳ ವಿವಿಯ ಲಾಂಛನ ಅನಾವರಣಗೊಳಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕೊಪ್ಪಳ ವಿವಿ ಲಾಂಛನ ಅನಾವರಣ
ರಮೇಶ್ ಬಿ. ಜವಳಗೇರಾ
|

Updated on:Jun 02, 2023 | 2:20 PM

Share

ಮುಖ್ಯಾಂಶಗಳು

  • ಕೊಪ್ಪಳ ವಿವಿಯ ಲಾಂಛನ ಅನಾವರಣಗೊಳಿಸಿದ ರಾಜ್ಯಪಾಲರು
  • ರಾಜಭವನದಲ್ಲಿ ಲಾಂಛನ ಅನಾವರಣಗಳಿಸಿದ ರಾಜ್ಯಪಾಲ ಗೆಹ್ಲೋಟ್
  • ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್, ಬಾಗಲಕೋಟೆ ವಿವಿ ಸೇರಿ ಹಲವು ವಿವಿಗಳ ಕುಲಪತಿಗಳು ಉಪಸ್ಥಿತಿ

ಬೆಂಗಳೂರು/ಕೊಪ್ಪಳ:  ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು(Koppal University logo) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(thawar chand gehlot) ಅವರು ಅನಾವರಣಗೊಳಿಸಿದರು. ಇಂದು(ಜೂನ್ 02) ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊಪ್ಪಳ ವಿವಿ ಲಾಂಛನವನ್ನು ಬಿಡುಗಡೆಗೊಳಿಸಿದರು. ಈ ವೇಳೆ ಕೊಪ್ಪಳ ವಿವಿ ಕುಲಪತಿ ಡಾ. ಬಿ.ಕೆ. ರವಿ, ಕೊಡಗು ವಿವಿ ಕುಲಪತಿ ಡಾ. ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ಡಾ. ದೇಶಪಾಂಡೆ, ಚಾಮರಾಜನಗರ ವಿವಿ ಕುಲಪತಿ ಡಾ. ಗಂಗಾಧರ್, ಬೀದರ್ ವಿವಿ ಕುಲಪತಿ ಡಾ. ಬಿರಾದಾರ್, ಹಾಸನ ವಿವಿ ಕುಲಪತಿ ಡಾ. ತಾರಾನಾಥ್ ಮತ್ತು ಹಾವೇರಿ ವಿವಿ ಕುಲಪತಿ ಡಾ. ಸುರೇಶ ಎಚ್. ಜಂಗಮಶೆಟ್ಟಿ ಉಪಸ್ಥಿತರಿದ್ದರು.

ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯಾದ್ಯಂತ 7 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಿತ್ತು.‌ ಅದರಲ್ಲಿ ಕೊಪ್ಪಳ‌ ವಿಶ್ವವಿದ್ಯಾಲಯವೂ ಒಂದಾಗಿದೆ.‌ 2023 ಮಾರ್ಚ್​ನಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕುಕನೂರು ತಾಲೂಕಿನ ತಳಕಲ್​ನಲ್ಲಿ ಕೊಪ್ಪಳ ವಿಶ್ವವಿದ್ಯಾಲಯವನ್ನು ವರ್ಚುವಲ್​ ಮೂಲಕ ಉದ್ಘಾಟಿಸಿದ್ದರು. ಸದ್ಯ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಪ್ರೊ.ಬಿ ಕೆ ರವಿ ಕುಲಪತಿಯಾಗಿದ್ದಾರೆ.

​ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ತಳಕಲ್​ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರದೇಶಿಕ ಕೇಂದ್ರ ನಡೆಯುತ್ತಿದೆ. ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿಯೇ ಕೇಂದ್ರ ಕಟ್ಟಡ ನಿರ್ಮಿಸಬೇಕು ಎನ್ನುವುದು ಇಲ್ಲಿನ ಹೋರಾಟಗಾರರ ಆಗ್ರಹವಾಗಿತ್ತು. ಆದ್ರೆ, ಕಟ್ಟಡದ ಕೊರತೆಯಿಂದಾಗಿ ಕೊಪ್ಪಳಕ್ಕೆ ಮಂಜೂರಾದ ಕೇಂದ್ರವನ್ನು ಸದ್ಯಕ್ಕೆ ತಳಕಲ್​ನಲ್ಲಿ ನಡೆಸಲಾಗುತ್ತಿದೆ. ತಳಕಲ್​ ಸಮೀಪದಲ್ಲಿ ಸರ್ಕಾರಿ ವಸತಿ ಪದವಿ ಕಾಲೇಜು ಕಟ್ಟಡ ನಿರ್ಮಾಣವಾಗಿದೆ.

ಕೊಪ್ಪಳ ವಿಶ್ವವಿದ್ಯಾಲಯ ಸ್ಥಾಪನೆಗೂ ಮುನ್ನ ಜಿಲ್ಲೆಯ ವಿದ್ಯಾರ್ಥಿಗಳು 300 ಕಿ.ಮೀ. ದೂರದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹೋಗಬೇಕಿತ್ತು. ಇಲ್ಲವೇ ಧಾರವಾಡದತ್ತ ಮುಖ ಮಾಡಬೇಕಿತ್ತು. ಸ್ಥಳೀಯಯರ ಹೋರಾಟದ ಫಲವಾಗಿ ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಹಳೆಯ ಕಟ್ಟದಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿತ್ತು.

Published On - 2:13 pm, Fri, 2 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ