AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ವಿವಿಯ ಲಾಂಛನ ಅನಾವರಣಗೊಳಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನಾವರಣಗೊಳಿಸಿದರು.

ಕೊಪ್ಪಳ ವಿವಿಯ ಲಾಂಛನ ಅನಾವರಣಗೊಳಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕೊಪ್ಪಳ ವಿವಿ ಲಾಂಛನ ಅನಾವರಣ
ರಮೇಶ್ ಬಿ. ಜವಳಗೇರಾ
|

Updated on:Jun 02, 2023 | 2:20 PM

Share

ಬೆಂಗಳೂರು/ಕೊಪ್ಪಳ:  ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು(Koppal University logo) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(thawar chand gehlot) ಅವರು ಅನಾವರಣಗೊಳಿಸಿದರು. ಇಂದು(ಜೂನ್ 02) ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊಪ್ಪಳ ವಿವಿ ಲಾಂಛನವನ್ನು ಬಿಡುಗಡೆಗೊಳಿಸಿದರು. ಈ ವೇಳೆ ಕೊಪ್ಪಳ ವಿವಿ ಕುಲಪತಿ ಡಾ. ಬಿ.ಕೆ. ರವಿ, ಕೊಡಗು ವಿವಿ ಕುಲಪತಿ ಡಾ. ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ಡಾ. ದೇಶಪಾಂಡೆ, ಚಾಮರಾಜನಗರ ವಿವಿ ಕುಲಪತಿ ಡಾ. ಗಂಗಾಧರ್, ಬೀದರ್ ವಿವಿ ಕುಲಪತಿ ಡಾ. ಬಿರಾದಾರ್, ಹಾಸನ ವಿವಿ ಕುಲಪತಿ ಡಾ. ತಾರಾನಾಥ್ ಮತ್ತು ಹಾವೇರಿ ವಿವಿ ಕುಲಪತಿ ಡಾ. ಸುರೇಶ ಎಚ್. ಜಂಗಮಶೆಟ್ಟಿ ಉಪಸ್ಥಿತರಿದ್ದರು.

ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯಾದ್ಯಂತ 7 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಿತ್ತು.‌ ಅದರಲ್ಲಿ ಕೊಪ್ಪಳ‌ ವಿಶ್ವವಿದ್ಯಾಲಯವೂ ಒಂದಾಗಿದೆ.‌ 2023 ಮಾರ್ಚ್​ನಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕುಕನೂರು ತಾಲೂಕಿನ ತಳಕಲ್​ನಲ್ಲಿ ಕೊಪ್ಪಳ ವಿಶ್ವವಿದ್ಯಾಲಯವನ್ನು ವರ್ಚುವಲ್​ ಮೂಲಕ ಉದ್ಘಾಟಿಸಿದ್ದರು. ಸದ್ಯ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಪ್ರೊ.ಬಿ ಕೆ ರವಿ ಕುಲಪತಿಯಾಗಿದ್ದಾರೆ.

​ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ತಳಕಲ್​ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರದೇಶಿಕ ಕೇಂದ್ರ ನಡೆಯುತ್ತಿದೆ. ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿಯೇ ಕೇಂದ್ರ ಕಟ್ಟಡ ನಿರ್ಮಿಸಬೇಕು ಎನ್ನುವುದು ಇಲ್ಲಿನ ಹೋರಾಟಗಾರರ ಆಗ್ರಹವಾಗಿತ್ತು. ಆದ್ರೆ, ಕಟ್ಟಡದ ಕೊರತೆಯಿಂದಾಗಿ ಕೊಪ್ಪಳಕ್ಕೆ ಮಂಜೂರಾದ ಕೇಂದ್ರವನ್ನು ಸದ್ಯಕ್ಕೆ ತಳಕಲ್​ನಲ್ಲಿ ನಡೆಸಲಾಗುತ್ತಿದೆ. ತಳಕಲ್​ ಸಮೀಪದಲ್ಲಿ ಸರ್ಕಾರಿ ವಸತಿ ಪದವಿ ಕಾಲೇಜು ಕಟ್ಟಡ ನಿರ್ಮಾಣವಾಗಿದೆ.

ಕೊಪ್ಪಳ ವಿಶ್ವವಿದ್ಯಾಲಯ ಸ್ಥಾಪನೆಗೂ ಮುನ್ನ ಜಿಲ್ಲೆಯ ವಿದ್ಯಾರ್ಥಿಗಳು 300 ಕಿ.ಮೀ. ದೂರದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹೋಗಬೇಕಿತ್ತು. ಇಲ್ಲವೇ ಧಾರವಾಡದತ್ತ ಮುಖ ಮಾಡಬೇಕಿತ್ತು. ಸ್ಥಳೀಯಯರ ಹೋರಾಟದ ಫಲವಾಗಿ ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಹಳೆಯ ಕಟ್ಟದಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿತ್ತು.

Published On - 2:13 pm, Fri, 2 June 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ