AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕೆಎಸ್​ಒಯು ಸುತ್ತೋಲೆ ಹೊರಡಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ನಿರಾಶೆಗೊಂಡಿದ್ದಾರೆ.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು
ಕರ್ನಾಟಕ ರಾಜ್ಯ ಮುಕ್ತ ವಿಶ್ವಾವಿದ್ಯಾಲಯ
TV9 Web
| Edited By: Rakesh Nayak Manchi|

Updated on: Jun 30, 2022 | 11:18 AM

Share

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುತ್ತೋಲೆ (Circular) ಹೊರಡಿಸಿದೆ. ಈ ನಿರ್ಧಾರದಿಂದಾಗಿ ವಿವಿಧ ಕೋರ್ಸ್​ಗಳಿಗೆ ಪ್ರವೇಶ ಕೋರಿರುವ ವಿದ್ಯಾರ್ಥಿಗಳಿಗೆ ನಿರಾಶೆಯಾಗಿದೆ.

2021-22ನೇ ಶೈಕ್ಷಣಿಕ ಸಾಲಿನ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್​ ಕಾಪಿಗಳನ್ನು ನೀಡಲಾಗುವುದಿಲ್ಲ, ಸಾಫ್ಟ್​ ಕಾಪಿಗಳನ್ನೇ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಸುತ್ತೋಲೆ ಹೊರಡಿಸಿದೆ. ಇದರ ಜೊತೆಗೆ ವಿವಿಧ ಕೋರ್ಸ್​ಗಳ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಭರವಸೆ ನೀಡಿದ್ದು, ಇದು ಹಾರ್ಡ್ ಕಾಪಿಗಳನ್ನು ಪಡೆಯಲು ವಿದ್ಯಾರ್ಥಿಗಳ ವೆಚ್ಚವನ್ನು ಸರಿಹೊಂದಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

ಅಧ್ಯಯನ ಸಾಮಗ್ರಿಗಳ ಸಾಫ್ಟ್​ ಕಾಪಿಗಳನ್ನು student app ನಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಕಾಪಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ವಿವಿಯ ಈ ನಿರ್ಧಾರಕ್ಕೆ ಹಲವು ನಿರಾಶೆ ವ್ಯಕ್ತಪಡಿಸಿದ್ದಾರೆ.

”ಸ್ಟಡಿ ಮೆಟೀರಿಯಲ್ ಸೇರಿದಂತೆ ಕೋರ್ಸ್ ಶುಲ್ಕವಾಗಿ 9 ಸಾವಿರ ಪಾವತಿಸಿದ್ದೇನೆ. ಪ್ರತಿ ವಿಷಯದಲ್ಲಿ ಐದರಿಂದ ಆರು ಇ-ಪುಸ್ತಕಗಳಿವೆ. ಸಾಫ್ಟ್ ಕಾಪಿಗಳನ್ನು ಈಗ ಇತರ ವಿದ್ಯಾರ್ಥಿಗಳ ಅಧ್ಯಯನ ಸಾಮಗ್ರಿಗಳಿಂದ ಮುದ್ರಿಸಬೇಕು ಅಥವಾ ಫೋಟೋಕಾಪಿ ಮಾಡಬೇಕು. ಇದರಿಂದ ಸಾವಿರಾರು ರೂಪಾಯಿ ವೆಚ್ಚವಾಗಲಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹೊರೆಯಾಗಲಿದೆ. ವಿಶ್ವವಿದ್ಯಾಲಯದ ಈ ನಿರ್ಧಾರವು ಪರೀಕ್ಷಾ ಫಲಿತಾಂಶಗಳ ಮೇಲೆ ಮತ್ತು ವಿವಿಯ ಖ್ಯಾತಿಯ ಮೇಲೆ ಪರಿಣಾಮ ಬೀರಲಿದೆ” ಎಂದು ಪ್ರಾಥಮಿಕ ಶಿಕ್ಷಕರೊಬ್ಬರು ಹೇಳಿದ್ದಾಗಿ ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ ಮಾಡಿ ಆದೇಶ; ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!