AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕೆಎಸ್​ಒಯು ಸುತ್ತೋಲೆ ಹೊರಡಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ನಿರಾಶೆಗೊಂಡಿದ್ದಾರೆ.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು
ಕರ್ನಾಟಕ ರಾಜ್ಯ ಮುಕ್ತ ವಿಶ್ವಾವಿದ್ಯಾಲಯ
TV9 Web
| Updated By: Rakesh Nayak Manchi|

Updated on: Jun 30, 2022 | 11:18 AM

Share

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುತ್ತೋಲೆ (Circular) ಹೊರಡಿಸಿದೆ. ಈ ನಿರ್ಧಾರದಿಂದಾಗಿ ವಿವಿಧ ಕೋರ್ಸ್​ಗಳಿಗೆ ಪ್ರವೇಶ ಕೋರಿರುವ ವಿದ್ಯಾರ್ಥಿಗಳಿಗೆ ನಿರಾಶೆಯಾಗಿದೆ.

2021-22ನೇ ಶೈಕ್ಷಣಿಕ ಸಾಲಿನ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್​ ಕಾಪಿಗಳನ್ನು ನೀಡಲಾಗುವುದಿಲ್ಲ, ಸಾಫ್ಟ್​ ಕಾಪಿಗಳನ್ನೇ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಸುತ್ತೋಲೆ ಹೊರಡಿಸಿದೆ. ಇದರ ಜೊತೆಗೆ ವಿವಿಧ ಕೋರ್ಸ್​ಗಳ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಭರವಸೆ ನೀಡಿದ್ದು, ಇದು ಹಾರ್ಡ್ ಕಾಪಿಗಳನ್ನು ಪಡೆಯಲು ವಿದ್ಯಾರ್ಥಿಗಳ ವೆಚ್ಚವನ್ನು ಸರಿಹೊಂದಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

ಅಧ್ಯಯನ ಸಾಮಗ್ರಿಗಳ ಸಾಫ್ಟ್​ ಕಾಪಿಗಳನ್ನು student app ನಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಕಾಪಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ವಿವಿಯ ಈ ನಿರ್ಧಾರಕ್ಕೆ ಹಲವು ನಿರಾಶೆ ವ್ಯಕ್ತಪಡಿಸಿದ್ದಾರೆ.

”ಸ್ಟಡಿ ಮೆಟೀರಿಯಲ್ ಸೇರಿದಂತೆ ಕೋರ್ಸ್ ಶುಲ್ಕವಾಗಿ 9 ಸಾವಿರ ಪಾವತಿಸಿದ್ದೇನೆ. ಪ್ರತಿ ವಿಷಯದಲ್ಲಿ ಐದರಿಂದ ಆರು ಇ-ಪುಸ್ತಕಗಳಿವೆ. ಸಾಫ್ಟ್ ಕಾಪಿಗಳನ್ನು ಈಗ ಇತರ ವಿದ್ಯಾರ್ಥಿಗಳ ಅಧ್ಯಯನ ಸಾಮಗ್ರಿಗಳಿಂದ ಮುದ್ರಿಸಬೇಕು ಅಥವಾ ಫೋಟೋಕಾಪಿ ಮಾಡಬೇಕು. ಇದರಿಂದ ಸಾವಿರಾರು ರೂಪಾಯಿ ವೆಚ್ಚವಾಗಲಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹೊರೆಯಾಗಲಿದೆ. ವಿಶ್ವವಿದ್ಯಾಲಯದ ಈ ನಿರ್ಧಾರವು ಪರೀಕ್ಷಾ ಫಲಿತಾಂಶಗಳ ಮೇಲೆ ಮತ್ತು ವಿವಿಯ ಖ್ಯಾತಿಯ ಮೇಲೆ ಪರಿಣಾಮ ಬೀರಲಿದೆ” ಎಂದು ಪ್ರಾಥಮಿಕ ಶಿಕ್ಷಕರೊಬ್ಬರು ಹೇಳಿದ್ದಾಗಿ ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ ಮಾಡಿ ಆದೇಶ; ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ